ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿಶೇಷಚೇತನ ಮಕ್ಕಳಿಗೆ ನೀಡುವ ಜೀವನ ಕೌಶಶಲ್ಯದ ಶಿಕ್ಷಣ ಮಹತ್ವವಾದದ್ದು:ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ

ಭದ್ರಾವತಿ:ಸಾಮಾನ್ಯ ಶಿಕ್ಷಣಕ್ಕಿಂತ ವಿಶೇಷಚೇತನ ಮಕ್ಕಳಿಗೆ ನೀಡುವ ಜೀವನ ಕೌಶಶಲ್ಯದ ಶಿಕ್ಷಣ ಮಹತ್ವವಾದದ್ದು ಶಿಕ್ಷಣದ ಅರ್ಥ ಮತ್ತು ವ್ಯಾಪ್ತಿ ವಿಶಾಲವಾದದ್ದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ತಿಳಿದರು.
ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಮನ್ವಯ ಸಂಪನ್ಮೂಲ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ಚೇತನ ಮಕ್ಕಳ ಅಗತ್ಯ ಶೈಕ್ಷಣಿಕ ಸಾಮಗ್ರಿಗಳ ವಿತರಣೆ ಸಮಾರಂಭ ಉದ್ಘಾಟಿಸಿ ಹಾಗೂ ಕಿಟ್ ವಿತರಿಸಿ ಮಾತನಾಡಿದರು.
ನಾಲ್ಕುಗೋಡೆಗಳ ನಡುವೆ ಕಲಿಕೆ ಮೂಲಕ ದೊರೆಯುತ್ತಿದ್ದ ಶಿಕ್ಷಣ ಇಂದು ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ ಶಾಲೆ ಮಾತ್ರವಲ್ಲದೆ ಸಮಾಜದ ಸಹಭಾಗಿತ್ವವನ್ನು ಹೊಂದಿದೆ ಎಲ್ಲಾ ಅಂಗಾಂಗಗಳು ಉತ್ತಮವಿರುವ ಮಕ್ಕಳು ಪುಸ್ತಕದ ಶಿಕ್ಷಣಪಡೆದರೆ,ವಿಶಿಷ್ಟಚೇತನ ಮಕ್ಕಳು ಜೀವನದ ಶಿಕ್ಷಣ ಪಡೆಯುತ್ತಾರೆ ಈ ಮೂಲಕವೂ ಸಾಧನೆ ಸಾಧ್ಯವಿದೆ ಶಿಕ್ಷಣದಿಂದ ಮಾತ್ರ ದೇಶದ ಬದಲಾವಣೆ ಸಾಧ್ಯ ಸಮುದಾಯ ಸುಖವಾಗಿದ್ದರೆ ದೇಶ ಸುಖವಾಗಿರುತ್ತದೆ ಎಂದರು.
ವಿಶೇಷಚೇತನ ಮಕ್ಕಳಿಗೆ ಜೀವನ ಕೌಶಲ್ಯ ನೀಡುವುದು ಸುಲಭದ ಕೆಲಸವಲ್ಲ ಇವರಿಗೆ ಶಕ್ತಿ ತುಂಬಲು ಪೋಷಕರು ಸೇರಿದಂತೆ ಎಲ್ಲರೂ ಸಹ ಆಶಾಕಿರಣದಂತೆ ಕೈಜೋಡಿಸಬೇಕು ಎಂದರು.
ಕ್ಷೇತ್ರ ಸಮನ್ವಯ ಅಧಿಕಾರಿ ಪಂಚಾಕ್ಷರಿ ಪ್ರಾಸ್ತಾವಿಕವಾಗಿ ಮಾತನಾಡಿ,ಸರ್ಕಾರದ ಯೋಜನೆಗಳಿಂದ ಮಾತ್ರವೇ ವಿಶಿಷ್ಟಚೇತರ ಸಮಸ್ಯೆಗಳ ನಿವಾರಣೆ ಅಸಾಧ್ಯ ಸರ್ಕಾರೇತರ ಸಂಸ್ಥೆಗಳಿಂದ ಹಾಗೂ ಸಮಾಜದ ವಿವಿಧ ಸಂಘ ಸಂಸ್ಥೆಗಳಿಂದ ಸ್ಪಂದನೆ ದೊರೆತಾಗ ಮಾತ್ರ ವಿಶಿಷ್ಟಚೇತನ ಮಕ್ಕಳ ಸಮಸ್ಯೆಗಳ ನಿವಾರಣೆ ಸಾಧ್ಯ ಎಂದರು.ಕಾರ್ಯಕ್ರಮದಲ್ಲಿ ದಾವಣಗೆರೆ ಸಿ.ಆರ್.ಸಿ ಕೇಂದ್ರದ ಡಾ.ವಿಜಯರಾಜ್,ಹಿರಿಯ ಆರೋಗ್ಯ ಸಹಾಯಕ ಆನಂದಮೂರ್ತಿ,ಆರೋಗ್ಯ ಇಲಾಖೆ ಅಧಿಕಾರಿ ಸುಶೀಲ,ಕ್ಷೇತ್ರ ಸಮನ್ವಯ ಸಂಪನ್ಮೂಲ ವ್ಯಕ್ತಿಗಳಾದ ತೀರ್ಥಪ್ಪ, ಟಿ.ಎನ್.ಪ್ರತಿಭಾ,ರೇಣುಕಾ,ಜಯಲಕ್ಷ್ಮೀ,
ಶಿಕ್ಷಣ ಇಲಾಖೆಯ ಪ್ರಭಾಕರ್,ವೇಣುಗೋಪಾಲ್,ವಿಜಯ್ ಮತ್ತಿತರರಿದ್ದರು. ಕಾರ್ಯಕ್ರಮದಲ್ಲಿ 38 ಮಕ್ಕಳಿಗೆ ಶೈಕ್ಷಣಿಕ ವಸ್ತುಗಳ ಕಿಟ್ ವಿತರಿಸಲಾಯಿತು.
ಹಳೆನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು.ಡಿ.ಎಚ್.ತೀರ್ಥಪ್ಪ ಸ್ವಾಗತಿಸಿದರು ರೇಣುಕಾ ನಿರೂಪಿಸಿದರು. ಜಯಲಕ್ಷ್ಮೀ ವಿಶೇಷ ಮಕ್ಕಳ ಪಟ್ಟಿ ಓದಿದರು.ಟಿ.ಎನ್.ಪ್ರತಿಭಾ ವಂದಿಸಿದರು.
ವರದಿ-ಕೆ.ಆರ್.ಶಂಕರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ