ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭದ್ರಾವತಿ ಉಪವಿಭಾಗದ ವತಿಯಿಂದ ಅಪರಾಧ ತಡೆ ಮಾಸಾಚರಣೆ:ಬೀದಿ ನಾಟಕಕ್ಕೆ ಚಾಲನೆ ನೀಡಿದ ಎಸ್ ಪಿ ಮಿಥುನ್ ಕುಮಾರ್

ಭದ್ರಾವತಿ:ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲಾ ಪೋಲಿಸ್ ಹಾಗೂ ಭದ್ರಾವತಿ ಉಪ ವಿಭಾಗದ ಪೊಲೀಸರು ಹಮ್ಮಿಕೊಳ್ಳಲಾಗಿದ್ದ ಬೀದಿ ನಾಟಕ ಹಾಗೂ ಜಾಗೃತಿ ಜಾಥಾಗೆ ತಮಟೆ ಬಾರಿಸುವ ಮೂಲಕ ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಚಾಲನೆ ನೀಡಿದರು.
ಅಂಡರ್ ಬ್ರಿಡ್ಜ್ ನಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಜಾನಪದ ಕಲಾ ತಂಡದ ತಮಟೆ ಜಗದೀಶ್ ಹಾಗೂ ತಂಡದ ಕಲಾವಿದರು ಮಹಿಳಾ ಸುರಕ್ಷತೆ,ಸೈಬರ್ ಅಪರಾಧ ತಡೆ ಹಾಗೂ ಸಂಚಾರಿ ನಿಯಮಗಳ ಪಾಲನೆ ಕುರಿತು ಹಾಡು ಹಾಗೂ ಬೀದಿ ನಾಟಕದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಇದಕ್ಕೂ ಮೊದಲು ನ್ಯೂಟೌನ್ ಪೋಲಿಸ್ ಠಾಣೆಯಿಂದ ಅಂಡರ್ ಬ್ರಿಡ್ಜ್,ಹೊಸ ಸೇತುವೆ ರಸ್ತೆ, ತಾಲ್ಲೂಕು ಕಚೇರಿ,ರಂಗಪ್ಪ ವೃತ್ತ,ಮಾಧವಾಚಾರ್ ವೃತ್ತ,ಬಿ ಹೆಚ್ ರಸ್ತೆ ಮೂಲಕ ಅಂಡರ್ ಬ್ರಿಡ್ಜ್ ವರೆಗೆ ದ್ವಿಚಕ್ರ ವಾಹನದಲ್ಲಿ ಜಾಥಾ ನಡೆಸಿದರು.
ಉಪವಿಭಾಗದ ಡಿವೈಎಸ್ಪಿ ಕೆ ಆರ್ ನಾಗರಾಜ್ ನೇತೃತ್ವದಲ್ಲಿ ನಗರ ಸಿಪಿಐ ಶ್ರೀಶೈಲಕುಮಾರ್, ಕಾಗದನಗರ ಪಿಐ ನಾಗಮ್ಮ,ಗ್ರಾಮಾಂತರ ಪಿ ಐ ಜಗದೀಶ್ ಹಂಚನಾಳ್,ಉಪವಿಭಾಗದ ವಿವಿಧ ಪೋಲಿಸ್ ಠಾಣೆಗಳ ಠಾಣಾಧಿಕಾರಿಗಳಾದ ಶಾಂತಲಾ,ರಮೇಶ್,ಪೋಲಿಸ್ ಠಾಣೆಗಳ ಠಾಣಾಧಿಕಾರಿಗಳು,ಶರಣಪ್ಪ ಹಂಡ್ರಗಲ್, ಕೃಷ್ಣಕುಮಾರ್,ಶಿಲ್ಪ,ಜಯ್ಯಪ್ಪ ಹಾಗೂ ಎಲ್ಲಾ ಠಾಣೆಗಳ ಸಹಾಯಕ ಠಾಣಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ವರದಿ:ಕೆ ಆರ್ ಶಂಕರ್ ಭದ್ರಾವತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ