ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬೆಳಗಾವಿ ಸುವರ್ಣ ಸೌಧದ ಮುಂದೆ ಪ್ರತಿಭಟನೆ:ಮಾನ್ಯತೆ ಪಡೆದ ಅನುದಾನ ರಹಿತ ಶಾಲೆಗಳ ಸಂಘ(ರಿ.)

ಕೊಟ್ಟೂರು:ಪಟ್ಟಣದಲ್ಲಿ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ ರಾಜ್ಯ ಕಾರ್ಯಧ್ಯಕ್ಷರಾದ ಕೊಟ್ರೇಶ್ ಜಿ.ಎಂ. ಅವರನ್ನೊಳಗೊಂಡ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಮಾಲೀಕರು ಎಲ್ಲಾ ವಿಭಾಗಗಳ ಸಂಘದ ಅಧ್ಯಕ್ಷರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಲವು ಬೇಡಿಕೆಗಗಳಿಗೆ ಒತ್ತಾಯ
1) ಶಾಲಾ ಮಾನ್ಯತೆಗಳ ನವೀಕರಣ ಹೈಕೋರ್ಟ್ ಆದೇಶದನ್ವಯ ಕನಿಷ್ಠ ಹತ್ತು ವರ್ಷಗಳಿಗೆ ಸೀಮಿತಗೊಳಿಸಬೇಕು.
2) ಶೇ 25% RTE ಅಡಿ ಮಕ್ಕಳ ನೋಂದಣಿಗೆ ಮರು ಅನುಷ್ಟಾನಗೊಳಿಸಬೇಕು.
3) ಫೈಯರ್ ಸೇಫ್ಟಿ ಬಿಲ್ಡಿಂಗ್ ಸೇಫ್ಟಿಯಿಂದ ವಿನಾಯಿತಿ ನೀಡಬೇಕು.
4) RT ಮರುಪಾವತಿ ಹಣ ಶಾಲಾ ವೆಚ್ಚಗಳಿಗೆ ತಕ್ಕಂತೆ ರೂ 35,000/- ಸಾವಿರ ನೀಡಬೇಕು.
5) ರಾಷ್ಟ್ರೀಯ ಶಿಕ್ಷಣ ನೀತಿ 2020 ರಾಜ್ಯದಲ್ಲಿ ಕಡ್ಡಾಯವಾಗಿ ಜಾರಿಗೆ ತರಬೇಕು.
6) SEP ಅನುಷ್ಟಾನವನ್ನು ಕೈಬಿಡಬೇಕು.
7) 1995 ರಿಂದ ಕನ್ನಡ ಶಾಲೆಗಳ ಅನುದಾನಕ್ಕೆ ಒತ್ತಾಯ ಸೇರಿ
ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಖಾಸಗಿ ಶಾಲೆಗಳ ಸಂಘ ವಿಜಯನಗರ ಜಿಲ್ಲೆಯ ಶಾಲಾ ಮಕ್ಕಳ ಪೋಷಕರು ದಿನಾಂಕ 11/12/2023 ರಂದು ಸುವರ್ಣ ಸೌಧದ ಮುಂದೆ ಪ್ರತಿಭಟನೆಯಲ್ಲಿ ಭಾಗವಹಿಸಿ ನಮ್ಮ ವಿವಿಧ ಬೇಡಿಕೆಗಳನ್ನು ಬೆಂಬಲಿಸಿ ಎಂದು ಪತ್ರಿಕೆ ಪ್ರಕಟಣೆ ಮೂಲಕ RUPSA (R)ನ ರಾಜ್ಯ ಕಾರ್ಯಧ್ಯಕ್ಷರಾದ ಕೊಟ್ರೇಶ್ ಜಿ.ಎಂ.ಮನವಿ ಮಾಡಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ