ಕಲಬುರಗಿ:ಇಲ್ಲಿನ ಖಾಜಾ ಬಂದಾನವಾಜ್ ವಿಶ್ವವಿದ್ಯಾಲಯದಲ್ಲಿ ಸೋಮವಾರ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಯಿತು ಈ ಕಾರ್ಯಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹೈದ್ರಾಬಾದ್ ಹೈ ಕೋರ್ಟಿನ ನ್ಯಾಯವಾದಿ ಇಸ್ಮಾಯಿಲ್ ಲತೀಫ್ ಖಾನ್ ಅವರು ಮಾತನಾಡಿ ಮಾನವ ಹಕ್ಕುಗಳ ದಿನಾಚರಣೆಯು ಸ್ವಾತಂತ್ರ್ಯ, ಸಮಾನತೆ ಮತ್ತು ನ್ಯಾಯದ ತತ್ವಗಳನ್ನು ಎತ್ತಿಹಿಡಿಯುವ ಬಗ್ಗೆ ಭಾವೋದ್ರಿಕ್ತ ವ್ಯಕ್ತಿಗಳನ್ನು ಒಟ್ಟುಗೂಡಿಸುವ ಮಹತ್ವದ ಸಂದರ್ಭವಾಗಿದೆ ಎಂದರು.ಈ ವರ್ಷದ ಥೀಮ್ ಈ ಮೂಲಭೂತ ಹಕ್ಕುಗಳನ್ನು ಗುರುತಿಸುವುದು ಮಾತ್ರವಲ್ಲದೆ ಮಾನವ ಹಕ್ಕುಗಳ ಸಮಸ್ಯೆಗಳನ್ನು ವರದಿ ಮಾಡುವಲ್ಲಿ ಮುಖ್ಯವಾಹಿನಿಯ ಮಾಧ್ಯಮಗಳ ನಿರ್ಣಾಯಕ ಪಾತ್ರವನ್ನು ಪರಿಶೀಲಿಸುವುದರ ಮೇಲೆ ಕೇಂದ್ರೀಕರಿಸಿದೆ ಎಂದರು. ವಿಶ್ವವಿದ್ಯಾನಿಲಯದ ಕಾನೂನು ವಿಭಾಗದ ಮುಖ್ಯಸ್ಥ/ಸಮನ್ವಯಾಧಿಕಾರಿ ಲುಬ್ನಾ ತನ್ವೀರ್ ಪ್ರಸ್ತಾವಿಕವಾಗಿ ಮಾತನಾಡಿದರು.ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ ಜಾವೆದ್ ಅಕ್ತರ್ ಕಾರ್ಯಕ್ರಮವನ್ನು ನಿರೂಪಿಸಿದರೆ,ಕಾನೂನು ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಸನ್ಪ್ರೀತ್ ಛಾಬ್ರಾ ವಂದಿಸಿದರು.
ವರದಿ:ಅಪ್ಪಾರಾಯ ಬಡಿಗೇರ




















