ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪತ್ರಕರ್ತರಿಗೆ ಸರ್ಕಾರ ಕನಿಷ್ಠ ವೇತನ ಜಾರಿಗೊಳಿಸಲಿ ಮಲ್ಲಣ್ಣ ಎಂ ಪೂಜಾರಿ ಸರ್ಕಾರಕ್ಕೆ ಆಗ್ರಹ


ಕಲ್ಬುರ್ಗಿ:ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮತ್ತು ಪ್ರಾದೇಶಿಕ ವಿದ್ಯಮಾನಗಳನ್ನು ಪತ್ರಿಕೆಗಳ ಹಾಗೂ ಯೂಟ್ಯೂಬ್ ಮುಖಾಂತರ ಸಮಾಜದಲ್ಲಿ ಹಲವಾರು ನೈಜ ಘಟನೆಗಳನ್ನು ಬಿತ್ತರಿಸುವ ಮೂಲಕ ಸಮಾಜದ ಅಂಕು ಡೊಂಕುಗಳನ್ನು ಎತ್ತಿ ತೋರಿಸಿ ಸರಿದಾರಿಗೆ ತರುವ ಕೆಲಸ ಪತ್ರಿಕಾ ಹಾಗೂ ದೃಶ್ಯ ಮಾಧ್ಯಮದವರು ಮಾಡುತ್ತಿದ್ದಾರೆ ಆದರೆ ನಮ್ಮ ದೇಶಕ್ಕೆ ಸ್ವತಂತ್ರ ಸಿಕ್ಕಿದೆ ತುಂಬಾ ಸಂತೋಷ ಆದರೆ ಹಗಲಿರುಳು ಸಮಾಜದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ಶಿಷ್ಟಾಚಾರ ನೀತಿ ನಿಯಮಗಳು ಕಾನೂನು ಬಾಹಿರ ಚಟುವಟಿಕೆಗಳನ್ನು ದೃಶ್ಯಮಾಧ್ಯಮ ಮತ್ತು ಪತ್ರಿಕೆಗಳ ಮುಖಾಂತರ ಎತ್ತಿ ತೋರಿಸುವ ಪತ್ರಕರ್ತರಿಗೆ ಹಾಗೂ ದೃಶ್ಯಮಾಧ್ಯಮ ಸಂಪಾದಕರಿಗೆ ಹಾಗೂ ಮಳೆ ಗಾಳಿ ಚಳಿ ಎನ್ನದೆ ಮನೆ ಮನೆಗೂ ಪತ್ರಿಕೆಗಳನ್ನು ವಿತರಿಸುವ ಪತ್ರಿಕಾ ವಿತರಕರಿಗೂ ಸರಕಾರದಿಂದ ಯಾವುದೇ ರೀತಿಯ ಸೌಲಭ್ಯಗಳು ಸಿಗದಿರುವುದು ನೋವಿನ ಸಂಗತಿ ಹಾಗೂ ದುರ್ದೈವದ ಸಂಗತಿಯಾಗಿದೆ ಸರ್ಕಾರದ 4ನೇ ಅಂಗವೆಂದು ಭಾಷಣ ಬಿಗಿಯುವ ರಾಜಕಾರಣಿಗಳು ಸಂವಿಧಾನದ ನಾಲ್ಕನೇ ಅಂಗವೆಂದು ಪರಿಗಣಿಸಲ್ಪಡುವ ಪತ್ರಿಕಾ ರಂಗಕ್ಕೆ ಹಾಗೂ ದೃಶ್ಯ ಮಾಧ್ಯಮದವರಿಗೆ ಸರಕಾರದಿಂದ ಯಾವುದೇ ರೀತಿಯಿಂದ ಕನಿಷ್ಠ ವೇತನ ಜಾರಿ ಮಾಡದಿರುವದು ಸಂವಿಧಾನ ಬಾಹಿರವಲ್ಲವೆ ಪತ್ರಿಕಾರಂಗಕ್ಕೆ ಸರ್ಕಾರ ಶೋಷಣೆ ಮಾಡಿದಂತಲ್ಲವೇ?ಕೂಡಲೇ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮಾಧ್ಯಮ ವರ್ಗದವರಿಗೆ ಹಾಗೂ ದೃಶ್ಯ ಮಾಧ್ಯಮದವರಿಗೆ ಸರಕಾರ ಕನಿಷ್ಠ ವೇತನ ಜಾರಿಗೊಳಿಸಿ ಸಂವಿಧಾನದ ನಾಲ್ಕನೇ ಅಂಗವೆಂದು ಪರಿಗಣಿಸಲ್ಪಡುವ ಪತ್ರಿಕಾ ಮಾಧ್ಯಮದವರಿಗೆ ಹಾಗು ದೃಶ್ಯ ಮಾಧ್ಯಮದವರಿಗೆ ನ್ಯಾಯ ಒದಗಿಸಿ ಕೊಡಬೇಕೆಂದು ಕನಕ ಕಾರ್ಮಿಕ ಕಲ್ಯಾಣ ಸಂಘಟನೆಯ ಯುವ ಘಟಕದ ರಾಜ್ಯಾಧ್ಯಕ್ಷರಾದ ಮಲ್ಲಣ್ಣ ಎಂ ಪೂಜಾರಿ (ಬಿಳವಾರ) ಅವರು ಪತ್ರಿಕಾ ಪ್ರಕಟಣೆಯ ಮುಖಾಂತರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ