ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ಕಾಳಿಕಾದೇವಿ ದೇವಸ್ಥಾನ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಕೋರಿ ಸಚಿವ ಶಿವರಾಜ ತಂಗಡಗಿ ಅವರನ್ನು ಭೇಟಿ ಮಾಡಿದ ಸಿಂಧನೂರಿನ ವಿಶ್ವಕರ್ಮ ಮುಖಂಡರು

ಸಿಂಧನೂರು ನಗರದ ವಾರ್ಡ್ ನಂಬರ್ 4ರಲ್ಲಿನ ವಿಶ್ವಕರ್ಮ ಸಮುದಾಯದ ಶಿಥಿಲಾವಸ್ಥೆಯಲ್ಲಿರುವ ಶ್ರೀ ಕಾಳಿಕಾದೇವಿ ದೇವಸ್ಥಾನ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಕೋರಿ ಸಚಿವ ಶಿವರಾಜ ತಂಗಡಗಿ ಅವರಿಗೆ ಕಾರಟಗಿಯ ನಿವಾಸದಲ್ಲಿ ಸಿಂಧನೂರಿನ ವಿಶ್ವಕರ್ಮ ಮುಖಂಡರು ಭೇಟಿ ಮಾಡಿ ಮನವಿ ಸಲ್ಲಿಸಿದರು.
ನಾಡಿನ ಐತಿಹಾಸಿಕ ವಾಸ್ತು ಶಿಲ್ಪ ಪರಂಪರೆಗೆ ಶಿಲ್ಪಿಗಳ ಕೊಡುಗೆ ಅಪಾರ ಎಂದು ಹಿಂದುಳಿದ ವರ್ಗ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಹೇಳಿದರು.
ಕಾರಟಗಿ ನಗರದ ತಮ್ಮ ನಿವಾಸದಲ್ಲಿ ಸಿಂಧನೂರಿನ ವಿಶ್ವಕರ್ಮ ಮುಖಂಡರ ಮನವಿ ಸ್ವೀಕರಿಸಿ ಮಾತನಾಡಿದ ಅವರು ವಿಶ್ವಕರ್ಮರು ತಮ್ಮದೇ ಆದ ಸಾಂಪ್ರದಾಯಿಕ ವೃತ್ತಿಯನ್ನು ಮಾಡುವ ಮೂಲಕ ಈ ನಾಡಿಗೆ ಕಲೆ,ಸಂಸ್ಕೃತಿ,ವಾಸ್ತುಶಿಲ್ಪಗಳನ್ನು ಕೊಡುಗೆ ನೀಡಿದವರು.ಇಂತಹ ಒಂದು ಅದ್ಭುತವಾದ ಕಲೆಯನ್ನು ಹೊಂದಿರುವ ಏಕೈಕ ಸಮಾಜ ವಿಶ್ವಕರ್ಮ ಸಮಾಜ.ಇಂತಹ ಸಮಾಜವನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸ ಬೇಕಾಗಿದೆ.ನಿಮ್ಮ ಮನವಿಯನ್ನು ಆದಷ್ಟೂ ಶೀಘ್ರವಾಗಿ ಪರಿಶೀಲಿಸಿ ಶ್ರೀ ಕಾಳಿಕಾದೇವಿ ದೇವಸ್ಥಾನ ಹಾಗೂ ಸಮುದಾಯ ಭವನ ನಿರ್ಮಾಣ ಮಾಡಿಕೊಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದ ರಾಜ್ಯ ಕಾರ್ಯದರ್ಶಿ ಸೋಮಣ್ಣ ಸುಕಲಪೇಟೆ,ವೀರೇಶ ದೇವರಗುಡಿ,ತಾಲೂಕ ಅದ್ಯಕ್ಷರಾದ ಮೌನೇಶ ತಿಡಿಗೋಳ,ಮುಖಂಡರುಗಳಾದ ಅಂಬಣ್ಣ ಗೊರೆಬಾಳ,ಧರ್ಮಣ್ಣ ಗುಂಜಳ್ಳಿ,ಷಣ್ಮುಖಪ್ಪ ಮುಳ್ಳೂರು,ಡಾ.ವೀರೇಶ ತಿಡಿಗೋಳ,ವೀರಭದ್ರಪ್ಪ ಹಂಚಿನಾಳ,ಮಂಜುನಾಥ ಕೊಟ್ನೆಕಲ್,ಮೌನೇಶ ಸಾಲವಾಡಗಿ,ಬಸವರಾಜ ಕಮತಗಿ,ಶಂಕರ ಪತ್ತಾರ, ಸುಶೀಲ ದೇವರಗುಡಿ,ಮುತ್ತಣ್ಣ ಪತ್ತಾರ,ವಿನೋದ ಪತ್ತಾರ,ಉಪೇಂದ್ರ ಆಚಾರಿ ಶಿಲ್ಪಿ,ರಾಜು ಬಳಗಾನೂರ,ಮಂಜುನಾಥ ಉಪ್ಪಲದೊಡ್ಡಿ,ವೀರೇಶ ಚನ್ನಳ್ಳಿ,ಚನ್ನಪ್ಪ ಕೆ.ಹೊಸಹಳ್ಳಿ ಇನ್ನೂ ಹಲವರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ