ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಸಿನೆಟ್ಟು ಮಂಡಲ ಪೂಜೆ ಮಾಡಿದ ಹನುಮ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಮಾಲಾಧಾರಿಗಳು

ಸಿಂಧನೂರು ತಾಲೂಕಿನ ಮುಚ್ಚಳ ಕ್ಯಾಂಪ್ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಹನುಮ ಮಾಲಧಾರಿಗಳು ಶ್ರೀ ಸಾಯಿ ಆಂಜನೇಯ ಪೀಠ 3ನೇ ವರ್ಷದ ಮಹಾಮಂಡಲ ಪೂಜೆ ಮತ್ತು ಮಹಾಪ್ರಸಾದ ಕಾರ್ಯಕ್ರಮದಲ್ಲಿ ತೆಂಗಿನ ಗಿಡ ನೆಟ್ಟು ಹಾಗೂ ವನಸಿರಿ ತಂಡದ ಸಮವಸ್ತ್ರಗಳನ್ನು ಹನುಮ ಮಾಲಾಧಾರಿಗಳಿಂದ ಉದ್ಘಾಟಿಸಲಾಯಿತು.

ಇದೇ ಸಂದರ್ಭದಲ್ಲಿ ಸಸಿನೆಟ್ಟು ಮಂಡಲ ಪೂಜೆ ನೆರವೇರಿಸಿ ವನಸಿರಿ ಫೌಂಡೇಶನ್ ಸದಸ್ಯರ ಟೀ ಶರ್ಟಗಳನ್ನು ಬಿಡುಗಡೆ ಮಾಡುವ ಮೂಲಕ ಪೂಜಾ ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತಾಧಿಗಳಿಗೆ ಪರಿಸರ ಜಾಗೃತಿ ಮೂಡಿಸಲಾಯಿತು.

ಇದೇ ಸಂದರ್ಭದಲ್ಲಿ ಕರ್ನಾಟಕ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್‌ ರಾಜ್ಯಾಧ್ಯಕ್ಷರಾದ ಅಮರೇಗೌಡ ಮಲ್ಲಾಪುರ,ಯುರೇಕಾ ಸ್ಪೋರ್ಟ್ಸ್ ಅಂಗಡಿ ಮಾಲಿಕರಾದ ಮಂಜುನಾಥ,ರಮೇಶಗೌಡ ಹರ್ವಾಪೂರ ಹಾಗೂ ಹನುಮ ಮಾಲಾಧಾರಿಗಳು ಮತ್ತು ಅಯ್ಯಪ್ಪ ಮಾಲಾಧಾರಿಗಳು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ