ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

21 ದಿನ ಪೂರೈಸಿದ ಹಕ್ಕು ಪತ್ರಕ್ಕಾಗಿ ಅಹೋರಾತ್ರಿ ಧರಣಿ ಸತ್ಯಾಗ್ರಹ:ಬೈಲಹೊಂಗಲ ಹರಳಯ್ಯ ಕಾಲನಿ ನಿವಾಸಿಗಳಿಂದ AC ಕಚೇರಿ ಎದುರು ಧರಣಿ:ಜಿಲ್ಲಾಧಿಕಾರಿಯವರಿಗೆ ಒಂದು ವಾರದ ಗಡುವು

ಬೆಳಗಾವಿ:ಜಿಲ್ಲೆಯ ಬೈಲಹೊಂಗಲ ತಾಲ್ಲೂಕು ಉಪ ವಿಭಾಗಾಧಿಕಾರಿಗಳ ಕಾರ್ಯಾಲಯದ ಮುಂದೆ ಡಿ.4 ರಂದು ಆರಂಭಗೊಂಡ ಕೊಳೆಗೇರಿ ನಿವಾಸಿಗಳ ಅಹೋರಾತ್ರಿ ಧರಣಿ ಸತ್ಯಾಗ್ರಹವು 21 ದಿನ ಪೂರೈಸಿದ್ದು ಧರಣಿ ಸ್ಥಳದಲ್ಲಿಯೇ ಅಡುಗೆ ತಯಾರಿಸಿ ಊಟ ಮಾಡುತ್ತಿದ್ದಾರೆ.
40ಕ್ಕೂ ಹೆಚ್ಚು ಕುಟುಂಬಗಳು 50 ವರ್ಷಗಳಿಂದ ಕೊಳಗೇರಿಯ ನಿವಾಸಗಳಲ್ಲಿ ವಾಸವಾಗಿದ್ದು, ಜನಪ್ರತಿನಿಧಿಗಳಿಗೆ,ಸಂಬಂಧಪಟ್ಟ ಅಧಿಕಾರಿಗಳಿಗೆ, ಕೊಳಚೆ ನಿರ್ಮೂಲ ಮಂಡಳಿಗೆ,ಹಕ್ಕು ಪತ್ರಕ್ಕಾಗಿ ಹಲವು ಬಾರಿ ಮನವಿ ನೀಡುತ್ತಾ ಬಂದಿದ್ದು, ಮಂಡಳಿಯವರೇನೋ ಭರವಸೆ ನೀಡುತ್ತಾ ಬಂದರು. ಅದನ್ನೇ ನಂಬಿಕೊಂಡು ಇದುವರೆಗೂ ಹಕ್ಕುಪತ್ರಕ್ಕಾಗಿ ಕಾದೆವು ಅವರ ಭರವಸೆಯ ಮಾತುಗಳನ್ನು ಕೇಳಿ ಕೇಳಿ ಬೇಸತ್ತು ಹೋಗಿದ್ದೇವೆ ಅಧಿಕಾರಿಗಳ ಮಾತು ಮಾತಾಗಿ ಉಳಿದಿದೆಯೇ ಹೊರತು ಹಕ್ಕು ಪತ್ರ ಯಾವುದು ಸಿಗಲಿಲ್ಲ.
ನಮ್ಮ ಮನೆಗಳ ಹಕ್ಕುಪತ್ರಗಳನ್ನು ನೀಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಬೆಳಗಾವಿ ವಿಭಾಗ ಕಚೇರಿಯ ಕಾರ್ಯಪಾಲಕ ಅಭಿಯಂತರ ಬಿ ಎಸ್ ಶಂಭುಲಿಂಗಪ್ಪ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಡಿ.21ರಂದು ಬೆಳಗಾವಿ ಜಿಲ್ಲಾಧಿಕಾರಿಯವರಿಗೆ ಬೈಲಹೊಂಗಲ ಉಪ ವಿಭಾಗಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಲಾಗಿದೆ.
ಒಂದು ವಾರದೊಳಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಅನಿವಾರ್ಯವಾಗಿ ಮನನೊಂದು ಅಹೋರಾತ್ರಿ ಅಮರಣಾಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುತ್ತೇವೆ,ಹೋರಾಟಕ್ಕೆ ನಿವಾಸಿಗಳಿಗೆ ಜೀವಹಾನಿಯಾದರೆ ಅದಕ್ಕೆ ತಾಲ್ಲೂಕು ಆಡಳಿತ, ಜಿಲ್ಲಾಡಳಿತ ಹಾಗೂ ಜಿಲ್ಲಾ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿ ಬಿ ಎಸ್ ಶಂಭುಲಿಂಗಪ್ಪ ಅವರೇ ಕಾರಣರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿಯವರಿಗೆ ಸಲ್ಲಿಸಿರುವ ಮನವಿಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಅಂಬೇಡ್ಕರ್ ಯುವ ಸೇನೆ(ರಿ.) ರಾಜ್ಯ ಉಪಾಧ್ಯಕ್ಷ ಹಾಗೂ ಹರಳಯ್ಯ ಕಾಲನಿ (ಮಚಗಾರ ಗಲ್ಲಿ) ನಿವಾಸಿ ಪರಶುರಾಮ ಬಿ ರಾಯಭಾಗ ನೇತೃತ್ವದಲ್ಲಿ ರಾಮು ಕಳಂಕರ,ನಾಗರಾಜ ಆಗಾಸಿ, ರೂಪಾ ದೊಡಮನಿ,ಅಲ್ಲಾಭಕ್ಷ ಪನಿಬಂದ್,ಜಾವಿದ್ ಸಯ್ಯದ್,ಮೈಮುನ್ ಒತ್ತಿಗೇರಿ,ಕಾಶವ್ವ ರಾಯಭಾಗ ಸೇರಿದಂತೆ ಹರಳಯ್ಯ ಕಾಲನಿ ನಿವಾಸಿಗಳು ತಮ್ಮ ಮಕ್ಕಳೊಂದಿಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.

ವರದಿ:ಕೆ ಆರ್ ಶಂಕರ್ ಭದ್ರಾವತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ