ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕ ರಕ್ಷಣಾ ವೇದಿಕೆ ಸಂಘದ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್,ಬುಕ್ ವಿತರಣೆ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೂತನೂರು,ಅಣ್ಣೂರು, ಬನ್ನಿತಾಳ ಪುರ,ಮಲ್ಲಯ್ಯನಪುರ,ಹೊಸಳ್ಳಿಹುಂಡಿ ಹಾಗೂ ಕಲಸೂರು ಗ್ರಾಮಗಳ ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ 400-500 ರೂಪಾಯಿಯ ಒಂದು ಒಳ್ಳೆ ಬ್ಯಾಗ್ ಹಾಗೂ ಬುಕ್,ಪೆನ್ ಅದೇ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಶೇಷ ಬಹುಮಾನ ಕೊಡಲಾಹಿತು ಇದೇ ಸಂದರ್ಭದಲ್ಲಿ ಕರವೇ ಅಧ್ಯಕ್ಷರು ಆದ ಸುರೇಶ ರವರು ಮಾತನಾಡಿ ಮಕ್ಕಳಿಗೆ ವಿದ್ಯಾಭ್ಯಾಸ ಒಂದು ಇದ್ದರೆ ಪ್ರಪಂಚದ ಯಾವುದೇ ಮೂಲೆಯಲ್ಲಿ ಬೇಕಾದರೂ ಜೀವನ ಕಟ್ಟಿಕೊಳ್ಳಬಹುದು ಹಾಗೆ ತಮ್ಮ ತಮ್ಮ ಊರಿನ ಶಾಲೆಯ ಅಭಿವೃದ್ಧಿ ಹಾಗೂ ಶಾಲೆಯ ಕೀರ್ತಿ ಎರಡನ್ನು ತರಬಹುದು ಎಂದು ಹೇಳಿದರು.ಇದೆ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರು ರಾಜೇಂದ್ರವಿನಾಯಕ,ಕಾರ್ಯದರ್ಶಿ ನಾಗರಾಜು, ಜಿಲ್ಲಾ ಸಂಘಟನೆ ಕಾರ್ಯದರ್ಶಿ ಜಗದೀಶ್ ಹಾಗೂ ಪದಾಧಿಕಾರಿಗಳು ಹಾಜರಿದ್ದರು.
ಅಣ್ಣೂರು ಗ್ರಾಮದ ಗ್ರಾಮ ಘಟಕ ಅಧ್ಯಕ್ಷರು ಮಹದೇವಸ್ವಾಮಿ ಹಾಗೂ ಮಲ್ಲಯ್ಯನಪುರ ಆಟೋ ಅಧ್ಯಕ್ಷರು ಮಹದೇವೇಗೌಡ ಹೊಸಳ್ಳಿಹುಂಡಿ, ಕೃಷ್ಣಮೂರ್ತಿ ಕೂತನೂರು,ಆಟೋ ಮಹೇಶ್ ಕೆಲಸೂರು,ಸ್ವಾಮಿ ಬನ್ನಿತಾಳಪುರ,ಆಟೋ ಸ್ವಾಮಿ ಹಾಜರಿದ್ದರು

ವರದಿ-ಗುಂಡ್ಲುಪೇಟೆ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ