ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರವೇ ಹೋರಾಟಗಾರ ಟಿಎ ನಾರಾಯಣ ಗೌಡರನ್ನು ಬಂಧಿಸಿರುವ ಸರ್ವಾಧಿಕಾರಿ ಸರ್ಕಾರಕ್ಕೆ ನನ್ನ ಧಿಕ್ಕಾರ: ಈರಣ್ಣ ಗೌಡ ಮಾಲಿ ಪಾಟೀಲ್ ಆಕ್ರೋಶ


ಕಲ್ಬುರ್ಗಿ ಸುದ್ದಿ:ಡಿ.29 ರಂದು ಕನ್ನಡ ನಾಮಪಲಕ ಹೋರಾಟದಲ್ಲಿ ಬಂಧಿತರಾದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡರನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಎಂದು ಜಯ ಕರ್ನಾಟಕ ಸಂಘಟನೆಯ ಯಡ್ರಾಮಿ ತಾಲೂಕ ಕಾರ್ಯಧ್ಯಕ್ಷರಾದ ಈರಣ್ಣ ಗೌಡ ಮಾಲಿ ಪಾಟೀಲ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಕನ್ನಡ ನಾಡು ನುಡಿ ಜಲಕ್ಕಾಗಿ ಹೋರಾಟ ಮಾಡುವ ಹೋರಾಟಗಾರರನ್ನು ಬಂಧಿಸಿರುವುದು ಸರ್ಕಾರದ ಈ ಸರ್ವಾಧಿಕಾರದ ಧೋರಣೆ ಸರಿಯಲ್ಲ ಈ ಕೂಡಲೇ ಕರ್ನಾಟಕದಲ್ಲಿ ಸರ್ಕಾರಕ್ಕೆ ಧಮ್ಮುಇದ್ದರೆ ಕನ್ನಡ ಭಾಷೆಯನ್ನು ಪ್ರಥಮ ಭಾಷೆಯನ್ನಾಗಿ ಆದೇಶ ನೀಡುವಂತೆ ಸರಕಾರಕ್ಕೆ ಸವಾಲು ಹಾಕಿದ್ದಾರೆ ಅದೇ ರೀತಿಯಾಗಿ ಕನ್ನಡಪರ ಹೋರಾಟಗಾರರನ್ನು ಈ ಕೂಡಲೇ ಬಿಡುಗಡೆ ಮಾಡಬೇಕು ಕರ್ನಾಟಕಕ್ಕೆ ಆದ ಅನ್ಯಾಯವನ್ನು ಸರ್ಕಾರವೇ ಸರಿಪಡಿಸಬೇಕು. ಕನ್ನಡಿಗರಿಗಾಗಿ ವಿಶೇಷ ಉದ್ಯೋಗಗಳನ್ನು ಸೃಷ್ಟಿಸಬೇಕು ಅದು ಬಿಟ್ಟು ಹೋರಾಟಗಾರರನ್ನು ಹತ್ತಿಕುವಂತಹ ಕೆಲಸಗಳನ್ನು ಬಿಟ್ಟು ಕನ್ನಡಿಗರಿಗೆ ನ್ಯಾಯವನ್ನು ಒದಗಿಸಬೇಕು ಕನ್ನಡಿಗರಾಗಿ ನಾವು ನಮ್ಮ ಭಾಷೆಯನ್ನು ಆರಾಧಿಸುತ್ತೇವೆ ಬೇರೆ ಭಾಷೆಗಳಿಗೆ ನಾವು ಗೌರವಿಸುತ್ತೇವೆ ಕನ್ನಡ ಭಾಷೆಗೆ ನಾಡು ನುಡಿಗೆ ಧಕ್ಕೆ ಬಂದರೆ ನಾಡಿನ ಸಲುವಾಗಿ ನಮ್ಮ ರಕ್ತವನ್ನೆ ಸುರಿಸಲು ನಾವು ಸಿದ್ಧರಿದ್ದೇವೆ ಈ ಕೂಡಲೇ ಕನ್ನಡಪರ ಹೋರಾಟಗಾರ ಟಿ.ಎ ನಾರಾಯಣಗೌಡ ಅವರನ್ನು ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಬಿಡುಗಡೆ ಮಾಡಬೇಕು ಇಲ್ಲದಿದ್ದರೆ ಕರ್ನಾಟಕ ರಾಜ್ಯದಲ್ಲಿ ಸರ್ಕಾರದ ವಿರುದ್ಧ ಉಗ್ರವಾದಂತಹ ಹೋರಾಟವನ್ನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಈರಣ್ಣ ಗೌಡ ಮಾಲಿ ಪಾಟೀಲ್ ಜಯ ಕರ್ನಾಟಕ ತಾಲೂಕ ಕಾರ್ಯಧ್ಯಕ್ಷರು ಯಡ್ರಾಮಿ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಸರ್ಕಾರಕ್ಕೆ ಖಡಕ್ಕಾಗಿ ಎಚ್ಚರಿಕೆ ನೀಡಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ