ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶರಣ ಸಾಹಿತ್ಯ ಪರಿಷತ್ತಿಗೆ ನೇಮಕ

ಬೀದರ:ಬಸವ ತತ್ವ ಪ್ರಚಾರಕರು,ಪರಿಸರ ಸಂರಕ್ಷಕರು,ಹೋರಾಟಗಾರರು,ಪ್ರಗತಿಪರ ಚಿಂತಕರು, ಸಾಂಸ್ಕೃತಿಕ ಸಂಘಟಕರು,ನಾಡು ನುಡಿ ನೆಲ ಜಲ ಭಾಷೆಗಾಗಿ ಹಗಲಿರುಳು ದುಡಿಯುತ್ತಿರುವ ಶರಣ ಸಂಗಮೇಶ ಎನ್ ಜವಾದಿ ರವರನ್ನು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ನೂತನ ಗೌರವ ಕಾರ್ಯದರ್ಶಿ ಯನ್ನಾಗಿ ನೇಮಕಾತಿ ಮಾಡಲಾಗಿದೆ ಎಂದು ತಿಳಿಸಿದರು.
ಸಂಗಮೇಶ ಎನ್ ಜವಾದಿ ರವರು
ಈ ಹಿಂದೆ ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ, ಚಿಟಗುಪ್ಪ ತಾಲೂಕಾಧ್ಯಕ್ಷರಾಗಿ ತನು ಮನದಿಂದ ಶ್ರಮಿಸಿದ್ದಾರೆ.ಇವರ ಸಾಹಿತ್ಯ ಸೇವೆ ಅಪಾರವಾದದ್ದು, ಜಿಲ್ಲೆಯಲ್ಲಿ ಶರಣ ಸಾಹಿತ್ಯ ಬೆಳೆಸುವಲ್ಲಿ ಇವರ ಕೊಡುಗೆ ದೊಡ್ಡದು ನಿರಂತರವಾಗಿ ದುಡಿಯುವ ಸೇವಕರು.ನ್ಯಾಯ,ನಿಷ್ಠೆ,ಶ್ರದ್ಧೆ,ದಕ್ಷತೆಗೆ ಮತ್ತು ಪ್ರಾಮಾಣಿಕ ಸೇವೆಗೆ ಹೆಸರಾದವರು ಜವಾದಿಯವರು.ಅದಕ್ಕಾಗಿ ಇವರ ಪರಿಶ್ರಮ ಗುರುತಿಸಿ ಶರಣ ಸಂಗಮೇಶ ಎನ್ ಜವಾದಿ ಯವರನ್ನು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯನ್ನಾಗಿ ನೇಮಕಾತಿ ಮಾಡಲಾಗಿದೆ.

ಇವರ ನೇಮಕಾತಿ ಮಾಡಲು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಿಗೆ ಬಹಳ ಸಂತೋಷ ಎನಿಸುತ್ತಿದೆ.ಈ ತಕ್ಷಣವೇ ಇವರು ತಮ್ಮ ಜವಾಬ್ದಾರಿಯನ್ನು ವಹಿಸಿಕೊಂಡು ಸಾಹಿತ್ಯ ಪರಿಷತ್ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು.ಈ ಮೂಲಕ ಶರಣ ಸಾಹಿತ್ಯ ಬೆಳೆಸುವಲ್ಲಿ ತನು ಮನದಿಂದ ಶ್ರಮಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ