ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಐವತ್ತರ ಸಂಭ್ರಮ:ರಥ ಯಾತ್ರೆ

ಜೇವರ್ಗಿ:ಕರ್ನಾಟಕ ಸರ್ಕಾರ ಮತ್ತು ಸಹ ಕನ್ನಡ ಸಂಘಗಳು ಆಯೋಜಿಸಿದ ಕರ್ನಾಟಕ ಸಂಭ್ರಮ ಐವತ್ತರ (೫೦) ರಥ ಯಾತ್ರೆ ದಿನಾಂಕ 05/1/2024 ರಂದು ಬೆಳಿಗ್ಗೆ 9:30 ಗಂಟೆಗೆ ಜೇವರ್ಗಿ ಪಟ್ಟಣದ ರಿಲಯನ್ಸ್ ಪೆಟ್ರೋಲ್ ಬಂಕ್ ಹತ್ತಿರ ಆಗಮಿಸಿ ಜೇವರ್ಗಿ ತಾಲ್ಲೂಕು ದಂಡಾಧಿಕಾರಿಗಳಾದ ಮಲ್ಲಣ್ಣ ಯಲಗೋಡ್ ರವರು ರಥೋತ್ಸವಕ್ಕೆ ಚಾಲನೆ ನೀಡಿ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟ ಬೇಕು ಎನ್ನುವ ಸಂಗೀತಕ್ಕೆ ಅದ್ಭುತವಾದ ನೃತ್ಯದ ಮುಖಾಂತರ ಕನ್ನಡ ಧ್ವಜವನ್ನೇತ್ತಿ ನಾವೆಲ್ಲರೂ ಕನ್ನಡಕ್ಕಾಗಿ ದುಡಿಯೋಣವೆಂದು ಜೇವರ್ಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶ್ರೀ ಎಸ್ ಕೆ ಬಿರಾದಾರ,ಜೇವರ್ಗಿ ತಾಲ್ಲೂಕು ವೈದ್ಯಾಧಿಕಾರಿಗಳಾದ ಡಾ:ಸಿದ್ದು ಪಾಟೀಲ್ ಹಾಗೂ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ನೃತ್ಯದ ಮುಖಾಂತರ ನೂರಾರು ಕನ್ನಡಾಭಿಮಾನಿಗಳು ಮತ್ತು ಶಾಲಾ- ಕಾಲೇಜಿನ ವಿದ್ಯಾರ್ಥಿಗಳು ಕನ್ನಡಾಂಬೆಯ ಘೋಷವನ್ನು ಕೂಗುತ್ತಾ ಅದ್ದೂರಿಯಾಗಿ ರಥೋತ್ಸವನ್ನು ಜರುಗಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಈ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳಾದ ಗೌಡಪಗೌಡ,ಸೈಬಣ್ಣ,ವಿರುಪಾಕ್ಷಿ ಹುಳಿಮನಿ,ಸಂಗಮೇಶ ಸಂಕಾಲಿ,ವಿನಾಯಕ ಹಡಪಾದ ಹಾಗೂ ಕನ್ನಾಡಾಭಿಮಾನಿಗಳು ಉಪಸ್ಥಿತರಿದ್ದರು.

ವರದಿ: ಚಂದ್ರಶಾಗೌಡ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ