ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಯುವಜನತೆ ಉತ್ತಮ ಹವ್ಯಾಸ ರೂಡಿಸಿಕೊಳ್ಳಿ:ಉಪ ವಿಭಾಗಾಧಿಕಾರಿ ಕನಿಷ್ಕ

ಕಾರವಾರ:ಯುವ ಜನತೆ ಉತ್ತಮ ಮತ್ತು ಆರೋಗ್ಯಕರವಾದ ಹವ್ಯಾಸಗಳನ್ನು ರೂಡಿಸಿಕೊಳ್ಳುವುದರ ಮೂಲಕ ಮಾದಕ ವಸ್ತುಗಳ ಸೇವನೆಯಿಂದ ದೂರ ಉಳಿದು ಮಾದಕ ವ್ಯಸನ ಮುಕ್ತ,ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಕಾರವಾರ ಉಪ ವಿಭಾಗಾಧಿಕಾರಿ ಕನಿಷ್ಕ ತಿಳಿಸಿದರು.
ಅವರು ಶನಿವಾರ,ರವೀಂದ್ರನಾಥ ಕಡಲ ತೀರದ ಮಯೂರ ವರ್ಮ ವೇದಿಕೆ ಬಳಿ,ಪೊಲೀಸ್ ಇಲಾಖೆ ವತಿಯಿಂದ ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನಡೆದ ಜಾಗೃತಿ walk and Run ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಾದಕ ವಸ್ತುಗಳ ಸೇವನೆಯಿಂದ ಕ್ಷಣಿಕ ಆನಂದ ದೊರೆತರೂ ದೈಹಿಕ ಮತ್ತು ಮನಸಿಕ ಆರೋಗ್ಯಕ್ಕೆ ಅತ್ಯಂತ ಹೆಚ್ಚು ದುಷ್ಪರಿಣಾಮ ಬೀರುತ್ತದೆ ಆದ್ದರಿಂದ ಯುವ ಜನತೆ ಉತ್ತಮ ಹವ್ಯಾಸಗಳನ್ನು ರೂಡಿಸಿಕೊಳ್ಳುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು, ಮಾದಕ ವಸ್ತುಗಳಿಂದ ದೂರವಿದ್ದು, ಜೀವನದಲ್ಲಿ ಉನ್ನತ ಸಾಧನೆಗಳನ್ನು ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ 1500 ಕ್ಕೂ ಅಧಿಕ ಮಂದಿ ಭಾಗವಹಿಸಿದ್ದು, ಸುಮಾರು 4 ಕಿ.ಮೀ ಗೂ ಅಧಿಕ walk and Run ನಡೆಸಲಾಯಿತು. ಮಾದಕ ವಸ್ತು ಬಳಕೆ ನಿಷೇಧ ಕುರಿತು ಪ್ರತಿಜ್ಞಾ ವಿಧಿ ಭೋಧಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗದೀಶ್ ನಾಯಕ್ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತಿತರರು ಭಾಗವಹಿಸಿದ್ದರು.

ವರದಿ ಸುಶಾಂತ್ ಭೋವಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ