ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿದ್ಯುತ್ ವಾಯರ್ ಕಳ್ಳರನ್ನು ಭೇದಿಸಿದ ಕುಷ್ಟಗಿ ಪೊಲೀಸರು

ಕುಷ್ಟಗಿ:ವಿದ್ಯುತ್ ವಾಯರ್ ಕಳ್ಳತನ ಮಾಡಿದ ಆರೋಪಿತರನ್ನು ಕುಷ್ಟಗಿ ಪೊಲೀಸರು ಬಂಧಿಸಿ 2,80,000 ರೂ. ಮೌಲ್ಯದ ಒಟ್ಟು 1,400 ಕೆ.ಜಿ. ತೂಕದ ವಿದ್ಯುತ್ ವಾಯರ್ ಶನಿವಾರ ವಶಕ್ಕೆ ಪಡೆದಿದ್ದಾರೆ.
ಕಳೆದ 2023 ನವೆಂಬರ್ 11 ರಂದು ಕುಷ್ಟಗಿ ಪಟ್ಟಣದ ಸರ್ವೆ ನಂಬರ್ 9/2. ಹಾಗೂ 9/3ನೇಯ ಕೆವಿಸಿ ನಗರದ ಖಾಲಿ ಪ್ಲಾಟಗಳ ರಸ್ತೆಗಳಲ್ಲಿನ ವಿದ್ಯುತ್ ಕಂಬಗಳಿಗೆ ಅಳವಡಿಸಲಾಗಿದ್ದ ವಿದ್ಯುತ್ ವಾಯರ್ ಕತ್ತರಿಸಿ ಕಳ್ಳತನ ಮಾಡಿರುವ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣ ಭೇದಿಸಲು ಕೊಪ್ಪಳ ಎಸ್ಪಿ ಯಶೋದಾ ವಂಟಿಗೋಡಿ ಅವರ ಮಾರ್ಗದರ್ಶನದ ಮೇರೆಗೆ ಕುಷ್ಟಗಿ ಸಿಪಿಐ ಯಶವಂತ ಬಿಸನಳ್ಳಿ, ಪಿಎಸ್’ಐ ಮುದ್ದುರಂಗಸ್ವಾಮಿ, ಕ್ರೈಂ ಪಿಎಸ್ಐ ಮಾನಪ್ಪ ವಾಲ್ಮೀಕಿ ಮತ್ತು ಸಿಬ್ಬಂದಿಗಳು ತಂಡವನ್ನು ರಚನೆ ಮಾಡಿಕೊಂಡು ತಾಲೂಕಿನ ಚಿಕ್ಕನಂದಿಹಾಳ ಗ್ರಾಮದ ಐವರು ಆರೋಪಿತರನ್ನು ಬಂಧಿಸಿದ್ದು ಅವರಲ್ಲಿದ್ದ 2.80.000 .ಮೌಲ್ಯದ 1400ಕೆಜಿ ವಿದ್ಯುತ್ ವಾಯರ್ ಹಾಗೂ ವಿದ್ಯುತ್ ವಾಯರ್ ಸಾಗಿಸಲು ಬಳಸಿದ್ದ 2 ಲಕ್ಷ ರೂ. ಬೆಲೆ ಬಾಳುವ ಮಹೇಂದ್ರ ಕಂಪನಿ ಜಿತೂ ವಾಹನ ವಶಕ್ಕೆ ಪಡೆದು ಆರೋಪಿತರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಕಳ್ಳರನ್ನು ಬಂಧಿಸಿ, ವಿದ್ಯುತ್ ವಾಯರ್ ವಶಪಡಿಸಿಕೊಳ್ಳಲು ಪತ್ತೆ ಕಾರ್ಯದಲ್ಲಿ ತೊಡಗಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಕ್ಕೆ ಕೊಪ್ಪಳ ಜಿಲ್ಲಾ ಎಸ್ಪಿ ಯಶೋಧ ವಂಟಿಗೋಡಿ ಅವರು ಶ್ಲಾಘಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ