ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಮಾನುಜ ಮುಖ್ಯ ರಸ್ತೆಯ ಮಾರ್ಗವೊಂದಕ್ಕೆ ಎನ್.ಸುನೀಲ್ ಕುಮಾರ್ ಹೆಸರು ಇಡಲು ಶ್ರಮಿಸುವೆ:ತೇಜಸ್ವಿ ನಾಗಲಿಂಗ ಸ್ವಾಮಿ

ಮೈಸೂರು:ಮಾಜಿ ಪಾಲಿಕೆ ಸದಸ್ಯ ದಿ. ಎನ್,ಸುನೀಲ್ ಕುಮಾರ್ ರವರ ಜನ್ಮದಿನದ ಪ್ರಯುಕ್ತ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ನಾನು ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದು ಬಂದ ಕ್ಷಣವೇ ರಾಮಾನುಜ ಮುಖ್ಯ ರಸ್ತೆಯ ಯಾವುದಾದರೂ ಮಾರ್ಗವೊಂದಕ್ಕೆ ಎನ್.ಸುನೀಲ್ ಕುಮಾರ್ ರವರ ಹೆಸರನ್ನು ನಾಮಕರಣ ಮಾಡಲು ಶ್ರಮಿಸುತ್ತೇನೆ ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಭರವಸೆ ನೀಡಿದರು.
ಸುನೀಲ್ ಕುಮಾರ್ ರವರು ನಮ್ಮನ್ನು ಅಗಲಿ ಮೂರು ವರ್ಷಗಳು ಕಳೆದಿದೆ ಸುನೀಲ್ ಕುಮಾರ್ ಅವರು ವೀರಶೈವ ಲಿಂಗಾಯತ ಸಮಾಜದ ಯುವ ನಾಯಕರಾಗಿದ್ದರು ಮತ್ತು ಕಾಂಗ್ರೆಸ್ ಪಕ್ಷದ ಕೃಷ್ಣರಾಜ ಕ್ಷೇತ್ರದ ಪ್ರಭಾವಿ ಮುಖಂಡರಾಗಿ ಗುರುತಿಸಿ ಕೊಂಡಿದ್ದರು 2013ರ ಪಾಲಿಕೆ ಚುನಾವಣೆಯಲ್ಲಿ (ರಾಮಾನುಜ ರಸ್ತೆ) ಇಂದಿನ 51ನೆ ಅಗ್ರಹಾರ ವಾರ್ಡಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿ ಅಗ್ರಹಾರ ವಾರ್ಡಿನ ಸರ್ವತೋಮುಖ ಅಭಿವೃದ್ಧಿಗೆ ಅವರು ಶ್ರಮಿಸಿದ್ದರು ಅವರ ನಿಧನದ ನಂತರ ನನ್ನ ನೇತೃತ್ವದಲ್ಲಿ ಸಮುದಾಯದ ಯುವಕರ ಜೊತೆ ಆಗಿನ ಮೈಸೂರು ಮಹಾ ಪೌರರಾಗಿದ್ದ ಸುನಂದಾ ಪಾಲನೇತ್ರ ಅವರಿಗೆ ಸುನೀಲ್ ಕುಮಾರ್ ರವರ ಹೆಸರನ್ನು ರಾಮಾನುಜ ಮುಖ್ಯ ರಸ್ತೆಯ ಮಾರ್ಗವೊಂದಕ್ಕೆ ನಾಮಕರಣ ಮಾಡುವಂತೆ ಮನವಿ ಮಾಡಿದ್ದೆವು ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಇದರಿಂದ ಅವರ ಅಭಿಮಾನಿಗಳಿಗೆ ತೀವ್ರ ನೋವುಂಟಾಗಿದೆ ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಸಧ್ಯದಲ್ಲೇ ಮೈಸೂರು ಮಹಾ ನಗರ ಪಾಲಿಕೆ ಚುನಾವಣೆ ಎದುರಾಗಲಿದ್ದು ಅಗ್ರಹಾರ ವಾರ್ಡಿನ ಕಾಂಗ್ರೆಸ್ ಪಕ್ಷದ ಆಕಾಂಕ್ಷಿ ಆಗಿರುವ ನಾನು ಪಾಲಿಕೆಯ ಚುನಾವಣೆಯಲ್ಲಿ ಆಯ್ಕೆಯಾದಲ್ಲಿ ದಿ.ಸುನೀಲ್ ಕುಮಾರ್ ರವರ ಹೆಸರನ್ನು ನಾಮಕರಣ ಮಾಡುವುದಾಗಿ ತೇಜಸ್ವಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ