ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಸಿರುಗುಪ್ಪ : ಪ್ರತಿಭಾ ಕಾರಂಜಿಯು ಮಕ್ಕಳಲ್ಲಿನ ಪ್ರತಿಭೆಗಳನ್ನು ಗುರುತಿಸಲು ಸಹಾಯವಾಗುತ್ತದಲ್ಲದೇ ಗ್ರಾಮೀಣ ಸೊಗಡಿನ ಜಾನಪದ, ಸಂಸ್ಕೃತಿಯ ಉತ್ತೇಜನವಾಗುತ್ತದೆಂದು ಶಾಸಕ ಎಂ.ಎಸ್.ಸೋಮಲಿ0ಗಪ್ಪ ತಿಳಿಸಿದರು.

ನಗರದ ವಿಶ್ವಜ್ಯೋತಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿಗಳ ಸಂಯುಕ್ತಾಶ್ರಯದಲ್ಲಿ ನಡೆದ 2022-23ನೇ ಸಾಲಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು.

ಪಿ.ಡಿ ಭಜಂತ್ರಿ ಕ್ಷೇತ್ರ ಶಿಕ್ಷಣಾಧಿಕಾರಿ ಮಾತನಾಡಿ ಅವರು ಎಲ್ಲಾ ಶಾಲೆಯ ಮಕ್ಕಳು ಭಾಗವಹಿಸುವುದರಿಂದ ಮಕ್ಕಳಲ್ಲಿ ವಿನೂತನ ಮಾದರಿಗಳ ತಯಾರಿಕೆ, ಹಿಂದಿನ ಕಾಲದ ವೇಷ ಭೂಷಣ, ಪುರಾಣ ಪ್ರವಚನ, ಯಕ್ಷಗಾನದಂತಹ ಧಾರ್ಮಿಕ ಸಂಸ್ಕೃತಿಗಳ ಜಾಗೃತಿ ಮೂಡುತ್ತದೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಧಾರ್ಮಿಕತೆಯ ಭಕ್ತಿ ಗೀತೆಗಳು ಮಂತ್ರಗಳ ಪಠಣ,
ಸಾಮೂಹಿಕ ನೃತ್ಯ ಸೇರಿದಂತೆ ಅನೇಕ ಕಾರ್ಯಕ್ರಮಗಳು ಜರುಗಿದವು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ವಿಶ್ವಜ್ಯೋತಿ ಶಾಲೆಯ ಆಡಳಿತ ಮಂಡಳಿಯಿ0ದ ಊಟದ ವ್ಯವಸ್ಥೆ ಮಾಡಲಾಗಿತ್ತು.

ಇದೇ ವೇಳೆ ತಹಶೀಲ್ದಾರ್ ಎನ್.ಆರ್.ಮಂಜುನಾಥಸ್ವಾಮಿ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ,
ಶಾಲೆಯ ನಿರ್ದೇಶಕ ವಿವೇಕ್ ಆನಂದ್
ಸೇರಿದಂತೆ ಶಿಕ್ಷಣ ಇಲಾಖೆಯ ಸಿಬ್ಬಂದಿಗಳು ವಿವಿಧ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ