ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿದ್ಯಾರ್ಥಿಗಳಿಗೆ ಭರವಸೆ ತುಂಬುವ ಕಾರ್ಯಕ್ರಮ

ಹನೂರು:ವಾರ್ಷಿಕ ಪರೀಕ್ಷೆಗಳಿಗೆ ಇನ್ನು ಕೆಲವೇ ದಿನಗಳು ಉಳಿದಿದ್ದು ವಿದ್ಯಾರ್ಥಿಗಳು ಈಗಿನಿಂದಲೇ ಯಾವ್ಯಾವ ವಿಷಯಕ್ಕೆ ಎಷ್ಟು ಸಮಯ ಮತ್ತು ಆದ್ಯತೆಯನ್ನು ನೀಡಬೇಕೆಂದು ಮನಗಂಡು ಉತ್ತಮ ಫಲಿತಾಂಶಕ್ಕಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ಸಲಹೆ ನೀಡಿದರು.
ತಾಲೂಕಿನ ಕೌದಳ್ಳಿ ಗ್ರಾಮದ ಶಾದಿ ಮಹಲ್ ಸಭಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಹನೂರು ತಾಲೂಕು ವತಿಯಿಂದ 2023-2024ನೇ ಸಾಲಿನ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಆಯೋಜಿಸಲಾಗಿದ್ದ ಭರವಸೆ ತುಂಬುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ತಂದೆ ತಾಯಿಗಳ ತ್ಯಾಗ,ಶಿಕ್ಷಕರ ಶ್ರಮ ಮತ್ತು ಮಾರ್ಗದರ್ಶನವನ್ನು ಅರಿತು ನಿರಂತರ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು ನಗರ ಪ್ರದೇಶಗಳಿಗೆ ಹೋಲಿಕೆ ಮಾಡಿದರೆ ಉತ್ತಮವಾದ ಪರಿಸರ ವಾತಾವರಣವನ್ನು ಹೊಂದಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪ್ರಕೃತಿಯನ್ನೇ ಶಕ್ತಿಯನ್ನಾಗಿಸಿ ಮುನ್ನುಗ್ಗಬೇಕು ಬರೆದಿರುವುದನ್ನು ಓದಿ,ಓದಿದ್ದನ್ನು ಮನನ ಮಾಡಿಕೊಂಡು ಉತ್ತಮ ರೀತಿಯಲ್ಲಿ ಪರೀಕ್ಷೆಯನ್ನು ಎದುರಿಸಬೇಕು.ನಮ್ಮ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಮತ್ತು ಗಣಿತ ವಿಷಯಗಳಲ್ಲಿ ಪ್ರಬುದ್ಧತೆ ಸಾಧಿಸುವ ನಿಟ್ಟಿನಲ್ಲಿ ಕಾರ್ಯಗಾರಗಳನ್ನು ಕೈಗೊಳ್ಳಬೇಕಾದ ಅವಶ್ಯಕತೆ ಇದೆ ನನ್ನ ಮೊದಲ ಆದ್ಯತೆ ಶಿಕ್ಷಣ,ಆರೋಗ್ಯ,ರೈತ ಆಗಿದ್ದು,ಶಿಕ್ಷಣ ಇಲಾಖೆಗೆ ಬೇಕಾದ ಸಹಕಾರವನ್ನು ನಾನು ಸದಾ ಒದಗಿಸುತ್ತೇನೆ ಎಂದರು.

ವಿದ್ಯಾರ್ಥಿಗಳ ಆತ್ಮ ವಿಶ್ವಾಸ:
ಶಾಸಕ ಎಂ.ಆರ್.ಮಂಜುನಾಥ್ ವಿನೂತನ ಆಲೋಚನೆಯಲ್ಲಿ ಮೂಡಿ ಬಂದಿರುವ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬುವ ದಿಸೆಯಲ್ಲಿ ಆಯೋಜಿಸಲಾಗಿದ್ದ ಭರವಸೆ ತುಂಬುವ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮದಿಂದ ನಮಗೆ ನಿಜಕ್ಕೂ ಸ್ಫೂರ್ತಿ, ಧೈರ್ಯ ಆತ್ಮವಿಶ್ವಾಸ ಮೂಡಿದೆ ಖಂಡಿತ ನಾವು ಉತ್ತಮ ಫಲಿತಾಂಶ ತಂದು ನಾವು ಓದಿದ ಶಾಲೆ, ಕಾಲೇಜು,ಶಿಕ್ಷಕರು,ತಂದೆ ತಾಯಿ,ನಿಮ್ಮೆಲ್ಲರಿಗೂ ಕೀರ್ತಿ ತರುತ್ತೇವೆ ಎಂದು ಭರವಸೆ ನೀಡಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ರಾಮಚಂದ್ರರಾಜೆ ಅರಸು, ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು,
ಶಿಕ್ಷಣ ಸಂಯೋಜಕರಾದ ಕಿರಣ್ ಕುಮಾರ್, ಕಂದವೇಲು ಸಿ.ಆರ್.ಪಿ.ಗಳಾದ ಅನಿಲ್ ಕುಮಾರ್, ಷಣ್ಮುಗಂ ದೇವರಾಜು ಮತ್ತು ಮುನಿರಾಜು,ಕೌದಳ್ಳಿ ಕ್ಲಸ್ಟರ್ನ ಪ್ರೌಢಶಾಲೆಯ ಮುಖ್ಯ ಶಿಕ್ಷಕರುಗಳಾದ ಕಾಂತರಾಜು ಶಿವಶಂಕರ್,ಸಿದ್ದರಾಜು,ಸಗಯಮೇರಿ ಇನ್ನು ಮುಂತಾದವರು ಹಾಜರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ