ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಯೋಧ್ಯ ಶ್ರೀರಾಮ ದೇವಸ್ಥಾನದ ಲೋಕಾರ್ಪಣಾ ನಿಮಿತ್ತವಾಗಿ ವಿಶೇಷ ಪೂಜಾ ಕಾರ್ಯಕ್ರಮ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಹಂಡಿತವಳ್ಳಿ ಗ್ರಾಮದಲ್ಲಿ ಅಯೋಧ್ಯ ಶ್ರೀ ರಾಮ ಮಂದಿರದ ಲೋಕಾರ್ಪಣಾ ಕಾರ್ಯಕ್ರಮದ ವಿಶೇಷವಾಗಿ ಶ್ರೀರಾಮದೇವರ ಶೋಭಾ ಯಾತ್ರೆ ಹಾಗೂ ಶ್ರೀ ಪುಟ್ಟ ಆಂಜನೇಯ ಸ್ವಾಮಿ ದೇವಸ್ಥಾನ ವಿಶೇಷ ಪೂಜೆ ಹಾಗೂ ಮಾರುತಿ ಸರ್ಕಲ್ ನಲ್ಲಿ ಮಾರುತಿಗೆ ವಿಶೇಷ ಪೂಜೆಯನ್ನು ಗ್ರಾಮಸ್ಥರು ನೆರವೇರಿಸಿದರು ಇಲ್ಲಿ ಮಹಿಳೆಯರು ಬಣ್ಣಗಳಿಂದ ಅಲಂಕೃತವಾದ ರಂಗೋಲಿಯನ್ನು ಹಾಕಿ ಸುತ್ತ ದೀಪ ಅಲಂಕಾರಗಳನ್ನು ಮಾಡಿ ಹಾಗೂ ಗ್ರಾಮದಲ್ಲಿ ಅಲ್ಲಲ್ಲೇ ಶ್ರೀರಾಮದೇವರ ಭಾವಚಿತ್ರಗಳನ್ನು ಅಳವಡಿಸಿ ಅವುಗಳಿಗೆ ವಿಶೇಷ ಪೂಜೆ ನೆರವೇರಿಸಿದ್ದು ವಿಶೇಷವಾಗಿತ್ತು.ಮನೆಗಳಲ್ಲಿ ದೀಪಾಲಂಕಾರ ಮತ್ತು ಮನೆಯ ಮುಂಭಾಗ ದೀಪಗಳನ್ನು ಹಚ್ಚಿ ಮತ್ತು ಅನ್ನದಾಸೋಹ ಕಾರ್ಯಕ್ರಮವನ್ನು ಗ್ರಾಮಸ್ಥರು ನೆರವೇರಿಸಿದರು ಅಲ್ಲದೆ ಶ್ರೀರಾಮದೇವರ ಶೋಭಾ ಯಾತ್ರೆ ಸಂದರ್ಭದಲ್ಲಿ ಮನೆಗಳಲ್ಲಿ ಪೂಜೆ ನೆರವೇರಿಸಿದರು.ಯುವಕರುಗಳು ಡಿಜೆ ಮೂಲಕ ಕಾರ್ಯಕ್ರಮಕ್ಕೆ ಮೆರಗು ತಂದರು ಈ ಕಾರ್ಯಕ್ರಮದಲ್ಲಿ ಎಲ್ಲಾ ಧರ್ಮ,ಜಾತಿಯ ಜನಾಂಗದವರು ಹಾಗೂಯುವಕರು ಮಹಿಳೆಯರು ಎಲ್ಲರೂ ಸೇರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.ಈ ಸಂದರ್ಭದಲ್ಲಿ ಯುವಕರು, ಗ್ರಾಮದ ಯಜಮಾನರು,ಗ್ರಾಮ ಪಂಚಾಯತಿ ಸದಸ್ಯರು ಸಹ
ಹಾಜರಿದ್ದರು.

ವರದಿ ಎಚ್ ಆರ್ ಶಂಕರ್,ಹಂಡಿತವಳ್ಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ