ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಂತೋನಿಯರ್ ಕೋವಿಲ್ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಘಟಕ ಸ್ಥಾಪನೆ

ಹನೂರು:ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂತೋನಿಯರ್ ಕೋವಿಲ್ ಗ್ರಾಮದಲ್ಲಿ ನೀರು ಹಾಕುವ ಮೂಲಕ ಉದ್ಘಾಟನೆ ಮಾಡಲಾಯಿತು.ಹೊಸದಾಗಿ ಸ್ಥಾಪನೆಯಾದ ಸಂಘದ ಸದಸ್ಯತ್ವ ಪಡೆದ ಸದಸ್ಯರಿಗೆ ಹಸಿರು ಶಾಲು ಹಾಕಿ ಸಂಘಕ್ಕೆ ಬರಮಾಡಿಕೊಂಡರು.
ಅಂತೋನಿಯರ್ ಕೋವಿಲ್ ಗ್ರಾಮದ ಘಟಕದ ರೈತ ಸಂಘದ ಅಧ್ಯಕ್ಷರಾಗಿ ಪೀಟರ್ ಪೆರಿಯ ನಾಯಗಂ, ಉಪಾಧ್ಯಕ್ಷರಾಗಿ ಧರ್ಮರಾಜ್,ಅಂತೋನಿಯಮ್ಮ, ಲಿಲ್ಲಿ ಪುಷ್ಪ,ಪ್ರೇಮ,ಮದಲೈಯಮ್ಮ ಇವರನ್ನು ಆಯ್ಕೆ ಮಾಡಲಾಯಿತು.
ಕರ್ನಾಟಕ ರಾಜ್ಯ ರೈತ ಸಂಘದ ಹನೂರು ತಾಲೂಕು ಘಟಕ ಅಧ್ಯಕ್ಷ ಗಂಗನದೊಡ್ಡಿ ಅಮ್ಜದ್ ಖಾನ್ ಮಾತನಾಡಿ ಹೊಸದಾಗಿ ಸ್ಥಾಪನೆಯಾದ ರೈತ ಸಂಘದ ಸದಸ್ಯತ್ವ ಪಡೆದ ಸದಸ್ಯರೆಲ್ಲರೂ ಒಗ್ಗಟಿನಿಂದ ಇರಬೇಕು,ಸರ್ಕಾರದಿಂದ ರೈತರಿಗೆ ಸಿಗುವ ಸೌಲಭ್ಯಗಳನ್ನು ರೈತ ಫಲಾನುಭವಿಗಳಿಗೆ ದೊರಕುವಂತೆ ಮಾಡಬೇಕು,ಸಂಘದ ಸದಸ್ಯರು ಭ್ರಷ್ಟಾಚಾರ ಮತ್ತು ಅಮಿಷಗಳಿಗೆ ಒಳಗಾಗದೆ ಸದಸ್ಯರು ಸಂಘದ ಏಳಿಗೆಗಾಗಿ ನಿಷ್ಠೆಯಿಂದ ಹಾಗೂ ಒಮ್ಮತದಿಂದ ಇರಬೇಕು ಎಂದರು.
ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಚಾಮರಾಜನಗರ ಜಿಲ್ಲಾ ಉಪಾಧ್ಯಕ್ಷರಾದ ಗೌಡೇಗೌಡ,ಲೋಕೇಶ್ ಗೌಡ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾಸ್ಕರ್.ಸಿ, ತಾಲೂಕು ಗೌರವಾಧ್ಯಕ್ಷ ರಾಜಣ್ಣ,ತಾಲೂಕು ಉಪಾಧ್ಯಕ್ಷ ಪಳನಿಸ್ವಾಮಿ, ಮಾರ್ಟಳ್ಳಿ ಘಟಕದ ಅಧ್ಯಕ್ಷ ಸೂಸೈ ಮಾಣಿಕ್ಯ0,ಅರ್ಪದರಾಜ್,ಅಂತೋನಿ ಸ್ವಾಮಿ, ಸಂತಿಯಾಗ್,ವೆಟ್ಟು ಕಾಡು ಮಹಿಳಾ ಘಟಕ ಅಧ್ಯಕ್ಷ ಸೂಸೈಯಮ್ಮ ಹಾಗೂ ಇನ್ನಿತರರು ಇದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ