ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೆ ಆರ್ ಎಸ್ ಪಕ್ಷದ ವತಿಯಿಂದ ಗಣರಾಜ್ಯೋತ್ಸವ ಆಚರಣೆ

ಸಿಂಧನೂರು:ಕೆ ಆರ್ ಎಸ್ ಪಕ್ಷದ ಕಚೇರಿಯಲ್ಲಿ 75 ನೇ ಗಣ ರಾಜ್ಯೋತ್ಸವದ ಆಚರಣೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು.ಇದೇ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಿರುಪಾದಿ ಕೆ ಗೋಮರ್ಸಿ ಸಂವಿಧಾನವನ್ನು ಜಾರಿಗೆ ತಂದು 75 ವರ್ಷಗಳು ಕಳೆದರೂ ಅದರಲ್ಲಿನ ಅಂಶಗಳು,ಕಾಯ್ದೆ ಕಾನೂನುಗಳು,ವಿಚಾರಗಳು ದೇಶದಾದ್ಯಂತ ಸರಿ ಸಮಾನವಾಗಿ ಇದ್ದರೂ ಸಹ ದೇಶದ ಜನತೆ ಸಾಮಾಜಿಕವಾಗಿ,ಆರ್ಥಿಕವಾಗಿ,ಶೈಕ್ಷಣಿಕವಾಗಿ,ರಾಜಕೀಯವಾಗಿ ಹಿಂದುಳಿದುರುವುದು ವಿಪರ್ಯಾಸ ಎಂದು ತಿಳಿಸಿದರು.ಡಾ ಬಿಆರ್ ಅಂಬೇಡ್ಕರ್ ಅವರ ಆದರ್ಶದ ಭಾರತದ ಕಲ್ಪನೆ ಸಂವಿಧಾನದ ಗುರಿ ಉದ್ದೇಶಗಳನ್ನು ಪ್ರತಿಯೊಬ್ಬರೂ ಪಲಿಸಿ ಮತ್ತು ಸಂವಿಧಾನದ ಪುಸ್ತಕ ಓದುವ ಅಭ್ಯಾಸ ಮಾಡಬೇಕು ಅಂದಾಗ ಮಾತ್ರ ಎಲ್ಲರೂ ಪ್ರಗತಿ ಸಾಧಿಸಲು ಸಾಧ್ಯ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ಅವರು ಮಾತನಾಡಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಸಂವಿಧಾನಕ್ಕೆ ಬದ್ದವಾಗಿ ಆಡಳಿತ ನಡೆಸಲು ಸಿದ್ಧವಿದ್ದು ಸಾರ್ವಜನಿಕರ ಜಾಗೃತಿಗಾಗಿ ಹಲವಾರು ಸಭೆ ಸಮಾರಂಭ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಗಂಗಾ ಕೆ ಮಸ್ಕಿ ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಅಯ್ಯಪ್ಪ ಮೇಟಿ,ಸಿಂಧನೂರು ತಾಲೂಕ ಅಧ್ಯಕ್ಷ ಶರಣಪ್ಪ ಹೂಗಾರ್,ಉಪದ್ಯಕ್ಷ ಸಿದ್ರಮಪ್ಪ ಪ್ರಧಾನ ಕಾರ್ಯದರ್ಶಿ ಚನ್ನಬಸವ ಸೋಮಲಾಪೂರ ಕಾರ್ಯದರ್ಶಿಗಳಾದ ಕೃಷ್ಣ ಸುಕಾಲಪೇಟೆ,ಅಜೀದ್,ವೀರೇಶ್ ಹುಸೇನಪ್ಪ ಬಾದರ್ಲಿ ಹಾಗೂ ಮುಖಂಡರು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ