ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಾಗನಗೌಡ ಕಂದಕೂರು ಅವರಿಗೆ ಅಭಿಮಾನಿಗಳಿಂದ ಶ್ರದ್ಧಾಂಜಲಿ ಸಮರ್ಪಣೆ

ಯಾದಗಿರಿ:ಗುರುಮಿಟ್ಕಲ್ ಮತ ಕ್ಷೇತ್ರದ ಮಾಜಿ ಶಾಸಕರಾದ ನಾಗನಗೌಡ ಕಂದಕೂರ ಅವರ ಆಕಸ್ಮಿಕವಾಗಿ ನಿಧನ ಹೊಂದಿದ ಹಿನ್ನೆಲೆಯಲ್ಲಿ ಅವರ ಅಭಿಮಾನಿ ಹಾಗೂ ವಡಗೇರಾ ತಾಲೂಕಿನ ತೇಕರಾಳ ಗ್ರಾಮದ ಗ್ರಾಮ ಪಂಚಾಯತ್ ಸದಸ್ಯರಾದ ಹಣಮಂತರಾಯ ಗೌಡ ಮಾಲಿಪಾಟೀಲ್ ರವರ ನೇತೃತ್ವದಲ್ಲಿ ಯಾದಗಿರಿ ಪಟ್ಟಣದಲ್ಲಿ ಗುರುಮಿಟ್ಟಿಕಲ್ ಮತಕ್ಷೇತ್ರದ ದಿವಂಗತ ಶ್ರೀ ನಾಗನಗೌಡ ಕಂದಕೂರ ಅವರ ಶ್ರದ್ದಾಂಜಲಿ ಸಭೆ ನೆರವೇರಿಸಿ ಅವರು ಮಾತನಾಡಿದರು ನಮ್ಮ ಭಾಗದ ಹಿರಿಯ ಶಾಸಕರಾದ ನಾಗನಗೌಡ ಕಂದಕೂರ ಅವರು ಈ ಮೊದಲು ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಯಾದಗಿರಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಹಲವಾರು ಜನಪ್ರಿಯ ಕೆಲಸ ಮಾಡಿದ್ದಾರೆ ಅವರ ಹೆಸರು ಶಾಶ್ವತಾಗಿ ಉಳಿದಿದೆ ಮತ್ತು ಗುರುಮಿಟಿಕಲ್ ಶಾಸಕರಾಗಿಯೂ ಕೂಡಾ ಐದು ವರ್ಷಗಳ ಕಾಲ ಒಳ್ಳೆ ಅಭಿವೃದ್ಧಿಪರ ಕೆಲಸಗಳನ್ನು ಮಾಡುವ ಮೂಲಕ ಹೆಸರುವಾಸಿಯಾಗಿದ್ದಾರೆ ಅವರ ಸಾವು ನಮಗೂ ಅವರ ಕಾರ್ಯಕರ್ತರಿಗೂ ತುಂಬಾ ನೋವು ತಂದಿದೆ ಎಂದು ಅವರು ಹೇಳಿದರು.ಈ ಸಂದರ್ಭದಲ್ಲಿ ನಿತೀಶ್ ಕುರಕುಂದಿ,ರವಿ ರಾಠೋಡ್,ಚಂದ್ರಾಯ ಗುತ್ತೇದಾರ್, ಪತ್ತು ರಾಠೂಡ್,ಶಿವರಾಂ ಕೂನಿಮನಿ,ಮೋಹನ್ ಕುರಕುಂದಿ,ಮೋಹನ್ ರಾಠೂಡ್ ಹಾಗೂ ಇನ್ನಿತರ ಉಪಸ್ಥಿತರಿದ್ದರು.

ವರದಿ:ಶಿವರಾಜ್ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ