ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಡಿವಾಳ ಮಾಚಿದೇವರ ಜಯಂತಿಯ ಪೂರ್ವಭಾವಿ ಸಭೆ

ಹನೂರು:ಫೆ.1ರಂದು ಬೆಳಗ್ಗೆ 10ಗಂಟೆಗೆ ಸರ್ಕಾರ ಆದೇಶದಂತೆ ಮಡಿವಾಳ ಮಾಚಿದೇವರ ಜಯಂತಿಯನ್ನು ಕಚೇರಿಯಲ್ಲಿ ಸರಳವಾಗಿ ಆಚರಣೆ ಮಾಡಲಾಗುವುದು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮುಖಂಡರ ಜೊತೆ ಚರ್ಚಿಸಿ ಬಳಿಕ ಅವರು ಮಾತನಾಡಿ,ಸರಳವಾದರೂ ಸರಿ ಅದ್ದೂರಿಯಾದರು ಸರಿ ಮಾಡಲು ಸಿದ್ಧವಿದ್ದೇವೆ.ಸಭೆ,ಕಾರ್ಯಕ್ರಮಕ್ಕೆ ಜಾಗ ಅಗತ್ಯ ಇದೆ ಹೀಗಾಗಿ ಸಮುದಾಯಭವನ ನಿರ್ಮಾಣ ಕುರಿತು ಚಿಂತನೆ ನೆಡೆಸಲಾಗುತ್ತಿದೆ ಮುಂದಿನ ದಿನಗಳಲ್ಲಿ ಹೇಳಲ್ಲ ಮಾಡೋಣ ಎಂದು ಭರವಸೆ ನೀಡಿದರು.
ಇದಕ್ಕೂ ಮುನ್ನ ವೀರ ಮಡಿವಾಳ ಸಂಘದ ಅಧ್ಯಕ್ಷರಾದ ವಿಜಯ್ ಕುಮಾರ್ ಮಾತನಾಡಿ ನಮ್ಮ ಮಡಿವಾಳ ಸಮುದಾಯಕ್ಕೆ ಒಂದು ಸಮುದಾಯ ಭವನ ಮಾಡಿಕೊಡಬೇಕು ಎಂದು ಶಾಸಕರಲ್ಲಿ ಮನವಿ ಮಾಡಿಕೊಂಡರು ನಂತರ ಮಾತನಾಡಿದವರು ನಮ್ಮ ನೂರು ಕ್ಷೇತ್ರದ ಶಾಸಕರಾದ ಎಮ್ ಆರ್ ಮಂಜುನಾಥ್ ರವರು ಎಲ್ಲಾ ಸಮುದಾಯದವರನ್ನು ಒಗ್ಗೂಡಿಸಿಕೊಂಡು ಹೋಗುತ್ತಿದ್ದಾರೆ ಹಾಗೆಯೇ ಸಣ್ಣ ಸಣ್ಣ ಸಮುದಾಯಗಳನ್ನು ಮೇಲಕ್ಕೆ ತಯಾರು ತರುವಲ್ಲಿ ಪ್ರಯತ್ನ ಮಾಡುವಂತ ಕಾರ್ಯಗಳನ್ನು ಮಾಡುತ್ತಿರುವುದು ನಮ್ಮ ಕ್ಷೇತ್ರಕ್ಕೆ ಹೆಮ್ಮೆಯ ವಿಚಾರ ಎಂದರು.
ತಹಶೀಲ್ದಾರ್ ಗುರುಪ್ರಸಾದ್,ಮಡಿವಾಳ ಮಾಚಿದೇವರ ಸಂಘದ ಅಧ್ಯಕ್ಷ ವಿಜಯ್, ಕಾರ್ಯದರ್ಶಿ ಕೃಷ್ಣ,ಮುಖಂಡರಾದ ಮೋಹನ್, ನಂದೀಶ್,ಶಾಂತರಾಜು,ಮಾದೇಶ,ಡಿ.ಆರ್. ಮಾದೇಶ, ಸುರೇಶ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ