ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಚಿತ್ರದುರ್ಗದ ನಗರದಲ್ಲಿ ಮೂರು ದಿನಗಳ ಕಾಲ ತೋಟಗಾರಿಕೆ ಇಲಾಖೆಯಿಂದ ಫಲಪುಷ್ಪ ಪ್ರದರ್ಶನ

ಚಿತ್ರದುರ್ಗ:ಫೆಬ್ರವರಿ 2 ರಿಂದ 4 ರವರೆಗೆ ಫಲ ಪುಷ್ಪ ಪ್ರದರ್ಶನವನ್ನು ತೋಟಗಾರಿಕೆ ಕಛೇರಿಯಲ್ಲಿ ಆಯೋಜಿಸಲಾಗಿದೆ.ಫೆ.2 ರಂದು ಸಂಜೆ 6 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಫಲ ಪುಷ್ಪ ಪ್ರದರ್ಶನ ಉದ್ಘಾಟಿಸಲಿದ್ದಾರೆ.ಪ್ರದರ್ಶನಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗಿದೆ,ಜಿಲ್ಲೆಯ ರೈತರು ಬೆಳೆದಿರುವ ಹಣ್ಣು ಮತ್ತು ತರಕಾರಿಗಳ ಪ್ರದರ್ಶನ ಏರ್ಪಡಿಸಲಾಗಿದೆ.ಸ್ತ್ರೀಶಕ್ತಿ ಸಂಘಗಳ ಸ್ಥಳೀಯ ಉತ್ಪನ್ನಗಳ ಮಾರಾಟಕ್ಕೂ ಅವಕಾಶ ಕಲ್ಪಿಸಲಾಗಿದೆ.
ಭಾರತ ಸಂವಿಧಾನ,ಚಂದ್ರಯಾನ ಅಂಗಳದಲ್ಲಿ ಲ್ಯಾಂಡರ್ ವಿಕ್ರಂ ಮತ್ತು ರೋವರ್ ಪ್ರಗ್ಯಾನ್ , ಚಂದ್ರಯಾನ 3 ಪ್ರದರ್ಶನಗೊಳ್ಳಲಿದೆ.ಜ್ಞಾನಪೀಠ ಪುರಸ್ಕೃತರು ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿದ ಮಹನೀಯರು ಹಣ್ಣು ಮತ್ತು ತರಕಾರಿಯಲ್ಲಿ ಅರಳಲಿದ್ದಾರೆ.
ನೀರು ಕೊಯ್ಲು ಘಟಕಗಳು,ಗೋಪಾಲಸ್ವಾಮಿ ಹೊಂಡ,ಅಕ್ಕ ತಂಗಿ ಹೊಂಡ ಮತ್ತು ಸಿಹಿ ನೀರು ಹೊಂಡ ಮಾದರಿಗಳು ಪ್ರದರ್ಶನಗೊಳ್ಳಲಿವೆ ಎಂದು
ಬುಧುವಾರ ಜಿಲ್ಲಾ ಪಂಚಾಯತ್ ಸಿಇಒ ಜೆ. ಸೋಮಶೇಖರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶಾಲಾ ಮಕ್ಕಳಿಗೆ ಜಾನಪದ ಹಾಗೂ ಭಾವಗೀತೆ, ಚಿತ್ರಕಲೆ ಪ್ರಬಂಧ ಸ್ಪರ್ಧೆ,ಹಣ್ಣು ಮತ್ತು ತಯಾರಿಕೆಗಳನ್ನು ಬಳಸಿ ಫ್ಯಾನ್ಸಿ ಡ್ರೆಸ್,ರಂಗೋಲಿ , ಹಣ್ಣು ಮತ್ತು ತರಕಾರಿಗಳನ್ನು ಗುರುತಿಸುವ ಸ್ಪರ್ಧೆ, ಏರ್ಪಡಿಸಲಾಗಿದೆ.ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದರು ‌.
ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಜಿ ಸವಿತಾ ,ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಬಿ ದೇವರಾಜ್,ಜಿಲ್ಲಾ ತೋಟಗಾರಿಕೆ ಸಂಘದ ಖಜಾಂಚಿ ನಾಗರಾಜ್ ಬೇಂದ್ರೆ ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!