ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ಗೃಹ ಸಚಿವರಾದ ಡಾಕ್ಟರ್ ಜಿ ಪರಮೇಶ್ವರ್ ಅವರ ಜಿಲ್ಲೆ ಇತ್ತೀಚಿನ ದಿನಗಳಲ್ಲಿ ಗುಬ್ಬಿ ತಾಲೂಕಿನಲ್ಲಿ ಸರಗಳ್ಳತನ ಹೆಚ್ಚಾಗಿದ್ದು ತಾಲೂಕಿನ ಗಂಟೆಪಾಳ್ಯದಲ್ಲಿ ವಾರದ ಹಿಂದೆ ಸರಗಳ್ಳತನವಾಗಿದ್ದು ಕೃತ್ಯದಲ್ಲಿ ಇಬ್ಬರು ಕಳ್ಳರು ತಮ್ಮ ಕೈಚಳಕ ತೋರಿಸಿದ್ದು ಗುಬ್ಬಿ ಪೊಲೀಸರು ಪ್ರಕರಣವನ್ನು ದಾಖಲಿಸಿ ಆರೋಪಿಗಳು ಬೆಂಗಳೂರಿನಲ್ಲಿ ತಲೆಮರಿಸಿಕೊಂಡಿದ್ದಾರೆ ಎಂಬ ಮಾಹಿತಿಯ ಮೇರೆಗೆ ಹುಲ್ಲೂರು ಗ್ರಾಮದ ನಿವಾಸಿ ಸೈಯದ್ ಅವನ ಸಹಚರನನ್ನು ಬಂಧಿಸಿ ಪೋಲಿಸ್ ಠಾಣೆಗೆ ಕರೆ ತಂದಿದ್ದು ಈತ ಡ್ಯಾನ್ಸ್ ಕೋರಿಯೋಗ್ರಾಫರ್ ಆಗಿ ನಿರ್ವಹಿಸುತ್ತಿದ್ದ ಎಂದು ತಿಳಿದಿದ್ದು ಸಿಆರ್ ನಂಬರ್ 13/2024/ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲು ಠಾಣೆಯಲ್ಲಿ ಇರಿಸಲಾಗಿತ್ತು ಪೊಲೀಸರ ವೈಫಲ್ಯವೋ ಅಥವಾ ಖದೀಮನ ಕೈಚಳಕವೋ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ದಫೇದಾರ್ ಹಾಗೂ ಪೊಲೀಸ್ ಕಾನ್ ಸ್ಟೇಬಲ್ ಕಣ್ತಪ್ಪಿಸಿ ಬೆಳಗಿನ ಜಾವ 4.30 ರ ಸಮಯದಲ್ಲಿ ಠಾಣೆಯಿಂದ ರಾಜಾರೋಷವಾಗಿ ಪರಾರಿಯಾಗಿದ್ದು ಪೊಲೀಸರ ನಿರ್ಲಕ್ಷ ಹಾಗೂ ಕರ್ತವ್ಯ ಲೋಪ ಎದ್ದು ಕಾಣುತ್ತದೆ.ಈ ಕುರಿತು ಸೂಕ್ತ ಉತ್ತರವನ್ನು ತುಮಕೂರು ಜಿಲ್ಲೆಯ ಪೋಲಿಸ್ ವರಿಷ್ಠಾಧಿಕಾರಿಗಳೇ ನೀಡಬೇಕಾಗಿದೆ ಒಟ್ಟಾರೆಯಾಗಿ ಗುಬ್ಬಿ ತಾಲೂಕಿನ ವ್ಯಾಪ್ತಿಯಲ್ಲಿ ಇದೊಂದು ವಿಶೇಷ ಪ್ರಕರಣವಾಗಿದ್ದು ಸಾರ್ವಜನಿಕರಿಗೆ ಪೊಲೀಸರ ಮೇಲೆ ನಂಬಿಕೆಯೇ ಇಲ್ಲದಂತಾಗಿದೆ.
ವರದಿ-ಡಿ.ಕೆ.ಲಿಂಗರಾಜು




















