ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬೀದರ ಜಿಲ್ಲಾ ಪ್ರಥಮ ದಲಿತ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ.ಕೆ.ಎಸ್.ಬಂಧು ಸಿದ್ದೇಶ್ವರಗೆ ಅಧಿಕೃತ ಆಹ್ವಾನ ಸರಳ ಸೌಜನ್ಯಶೀಲ ಲೇಖಕ-ಡಾ.ಬಂಧು

ಕಲಬುರಗಿ-ಶ್ರೀ ಯಲ್ಲಾಲಿಂಗೇಶ್ವರ ಟ್ರಸ್ಟ್ (ರಿ.) ಆನಂದಾಶ್ರಮ,ಸಸ್ತಾಪೂರ ಮತ್ತು ಜಿಲ್ಲಾ ದಲಿತ ಸಾಹಿತ್ಯ ಪರಿಷತ್ತು ಬೀದರ ಸಂಯುಕ್ತಾಶ್ರಯದಲ್ಲಿ ಪೂಜ್ಯ ಲಿಂ.ಸದ್ಗುರು ಯಲ್ಲಾಲಿಂಗೇಶ್ವರ 34 ನೇ ಪುಣ್ಯ ಸ್ಮರಣೋತ್ಸವ ಮತ್ತು ಪೂಜ್ಯ ಮಹಾದೇವಿ ತಾಯಿಶರಣೆ ಯವರ 59 ನೇ ಹುಟ್ಟು ಹಬ್ಬದ ಪ್ರಯುಕ್ತ ಬೀದರ ಜಿಲ್ಲಾ ಪ್ರಥಮ ದಲಿತ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಡಾ.ಕೆ.ಎಸ್.ಬಂಧು ಸಿದ್ದೇಶ್ವರ ಮತ್ತು ಧರ್ಮಪತ್ನಿ ಶ್ರೀಮತಿ ಮಹಾದೇವಿ.ಕೆ.ಬಂಧು ದಂಪತಿಗಳಿಗೆ ಕಲಬುರಗಿ ನಗರದ ಅವರ ನಿವಾಸದಲ್ಲಿ ದಂಪತಿಗಳಿಗೆ ಅದ್ದೂರಿಯಾಗಿ ಸನ್ಮಾನಿಸಿ ಸಮ್ಮೇಳನಕ್ಕೆ ಅಧಿಕೃತ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಲಾಯಿತು.ದಿನಾಂಕ 06 ಮತ್ತು 07 ಪೆಬ್ರವರಿ 2024 ಶ್ರೀ ಯಲ್ಲಾಲಿಂಗೇಶ್ವರ ಮಠ ಸಸ್ತಾಪೂರ ತಾ.ಬಸವಕಲ್ಯಾಣ ಜಿ.ಬೀದರದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸಂತಸ ಸಡಗರದಿಂದ ಆಹ್ವಾನಿಸಲಾಯಿತು.ಸನ್ಮಾನ ಸ್ವೀಕರಿಸಿ ಮಾತನಾಡಿದ ಸಮ್ಮೇಳನಾಧ್ಯಕ್ಷರಾದ ಡಾ.ಕೆ.ಎಸ್.ಬಂಧು ಸಿದ್ದೇಶ್ವರ ಅವರು ಸಾಹಿತ್ಯ ಸಮ್ಮೇಳನದಲ್ಲಿ ದಲಿತ ಸಾಹಿತ್ಯ ಬದುಕು ಬರಹ ,ಕವಿಗೋಷ್ಠಿ,ದಲಿತ ಜಾನಪದ ಸಂಸ್ಕೃತಿ ಗೋಷ್ಠಿ,ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನವಿದೆ ಹಾಗಾಗಿ ತಾವು ಬನ್ನಿ ತಮ್ಮವರನ್ನು ಕರೆ ತಂದು ಸಮ್ಮೇಳನವನ್ನು ಯಶಸ್ವಿಗೊಳಿಸಿ ಎಂದರು.ಕಾರ್ಯಕ್ರಮದಲ್ಲಿ ಮಠದ ಪೂಜ್ಯರಾದ ಗೌಡಪ್ಪಗೋಳ,ಡಾ.ಡೋಳೆ,ಡಾ‌.ಅಮೃತರಾವ್ ಬಾಳವಾಲೆ,ಲಿಂಗಪ್ಪ ಟಿಂಗಳಿ,ಮನೋಹರ ಮರಗುತ್ತಿ,ಸಿದ್ದರಾಮ ಸರಸಂಬಿ,ಅಂಬರಾಯ,ಡಾ.ಅವಿನಾಶ,ಶ್ರೀಮತಿ ಶಶಿಕಲಾ ಲಕ್ಷ್ಮಣರಾವ ಸೊಲ್ಲಾಪುರ,ಮಕ್ಕಳ ಕವಿ ಹಿರಿಯ ಸಾಹಿತಿ ಎ.ಕೆ.ರಾಮೇಶ್ವರ,ಕರ್ನಾಟಕಜಾನಪದ ಪರಿಷತ್ತು ಕಲಬುರಗಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಡಿ.ಪಿ.ಸಜ್ಜನ,ಬಾನುಕುಮಾರ ಗೀರೆಗೋಳ,ನಿಂಗಣ್ಣ ಉದನೂರ ಮುಂತಾದವರು ಉಪಸ್ಥಿತರಿದ್ದರು.
ಸಂಯೋಜಕರು ಮತ್ತು ಸಾಹಿತಿಗಳಾದ ಡಾ.ಗವಿಸಿದ್ದಪ್ಪ ಎಚ್ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು,ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾಧ್ಯಕ್ಷರಾದ ಸಿ.ಎಸ್.ಮಾಲೀಪಾಟೀಲ ವಂದಿಸಿದರು,ದಲಿತ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷರಾದ ಡಾ.ಪೀರಪ್ಪ ಬಿ ಸಜ್ಜನ ನಿರೂಪಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ