ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಾನಸ ಗಂಗೋತ್ರಿ ಪೂರ್ವ ಪ್ರಾಥಮಿಕ ಶಾಲೆಯ 5 ನೇ ವಾರ್ಷಿಕ ಸ್ನೇಹ ಸಮ್ಮೇಳನ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮೆಣಸಗೇರಿ ಗ್ರಾಮದ ಶ್ರೀ ಮಹರ್ಷಿ ವಾಲ್ಮೀಕಿ ವಿದ್ಯಾವರ್ಧಕ ಸಂಸ್ಥೆ(ರಿ.)ಯ ಮಾನಸ ಗಂಗೋತ್ರಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ 5 ನೇ ವಾರ್ಷಿಕ ಸ್ನೇಹ ಸಮ್ಮೇಳನ ಶುಕ್ರವಾರ ಸಂಜೆ ಅತ್ಯಂತ ಅದ್ದೂರಿಯಾಗಿ,ಯಶಸ್ವಿಯಾಗಿ ಜರುಗಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಯಮನೂರಪ್ಪ ತಳವಾರ ಅವರು ವಹಿಸಿಕೊಂಡಿದ್ದರು.
ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು,ಕ್ರೀಡೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಉದ್ಘಾಟಕರಾಗಿ ಶ್ರೀ ಶಂಕ್ರಪ್ಪ ಬಡಿಗೇರ,
ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತಿ ಸದಸ್ಯರಾದ ದೊಡ್ಡನಗೌಡ ಪಾಟೀಲ್, ಶ್ರೀ ಗೋವಿಂದ ಗೌಡ ಮಾಲಿ ಪಾಟೀಲ್,ಸಮಾಜ ಸುಧಾರಕರಾದ ಶ್ರೀ ಶೇಖಪ್ಪ ಮೇಟಿ,ಶ್ರೀ ಮರಿಯಪ್ಪ ಕಲಾದಗಿ,ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶೇಖಪ್ಪ ಉಪ್ಪಾರ,ಶ್ರೀ ಗಂಗಪ್ಪ ಚಿತ್ತವಾಡಗಿ,ಶ್ರೀ ದುರುಗಮ್ಮ.ಯ.ಹರಿಜನ,ಶ್ರೀ ಸಕ್ರಪ್ಪ ರಾಠೋಡ್,
ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಶ್ರೀ ಶರಣಪ್ಪ ತೋಟದ,ಶ್ರೀ ಬಸಪ್ಪ ಹುನಗುಂದ,ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಆರ್.ಎಮ್.ಕಾಲವಾಡ ಅವರೊಂದಿಗೆ ಗ್ರಾಮದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.ಇದೇ ಸಂದರ್ಭದಲ್ಲಿ ಶ್ರೀ ಹನುಮಗೌಡ ಕಲಕೇರಿ ಅವರಿಗೆ ಸನ್ಮಾನಿಸಲಾಯಿತು.ಒಟ್ಟಾರೆ ಗ್ರಾಮಸ್ಥರ ಸಹಕಾರದಿಂದ ಸ್ನೇಹ ಸಮ್ಮೇಳನ ಯಶಸ್ವಿಯಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ