ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮೆಣಸಿನಕಾಯಿ ಬೆಲೆ ಕುಸಿತ ಕಂಗಾಲಾದ ರೈತರು

ಗದಗ ಜಿಲ್ಲೆಯಲ್ಲಿ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾಗಿ ಬರಗಾಲ ಆವರಿಸಿದ್ದು ಮೆಣಸಿನಕಾಯಿ ಬೆಳೆಗಾರರು ತೀವ್ರ ಕಂಗಾಲಾಗಿದ್ದಾರೆ.
ಅಳಿದುಳಿದಿರುವ ಮೆಣಸಿನಕಾಯಿಯನ್ನು ಹತ್ತಿರದ ಮಾರುಕಟ್ಟೆಯಾದ ಬ್ಯಾಡಗಿ,ಹುಬ್ಬಳ್ಳಿ,ಗದಗ ಮಾರುಕಟ್ಟೆಯಲ್ಲಿ ತೆಗೆದುಕೊಂಡು ಹೋದಾಗ ಕ್ವಿಂಟಲ್ ಗೆ 35 ಸಾವಿರ ರೂಪಾಯಿಂದ 20 ಸಾವಿರ ರೂಪಾಯಿ ಮಾತ್ರ ಇದೆ ಕಳೆದ ವರ್ಷ ಬಂಗಾರದ ಬೆಲೆಯನ್ನು ಮೀರಿಸಿ 75 ಸಾವಿರ ರೂಪಾಯಿಗೆ ಕ್ವಿಂಟಲ ಮಾರಾಟವಾಗಿತ್ತು.
ಈ ವರ್ಷ ಉತ್ತಮ ಬೆಲೆ ಬರಲಿ ಎಂದು
ಅಂಗಲಾಚುವ ಸ್ಥಿತಿಗೆ ರೈತರು ತಲುಪಿದ್ದಾರೆ.
ಅತ್ಯಂತ ಜನಪ್ರಿಯವಾದ ಆಹಾರ ಪದಾರ್ಥಗಳಲ್ಲಿ ಬಳಸುವ ಮೆಣಸಿನಕಾಯಿ ಬೆಳೆಗೆ ಬೆಲೆಯಿಲ್ಲದೆ ರೈತ ಕಂಗಾಲಾಗಿದ್ದಾನೆ.
ಕರ್ನಾಟಕ ರಾಜ್ಯದ ಗದಗ ಜಿಲ್ಲೆಯಲ್ಲಿ ಅತ್ಯಂತ ಮಹತ್ವ ಹೊಂದಿರುವ ಮೆಣಸಿನಕಾಯಿ ಬೆಳೆಗಳಿಗೆ ಈ ವರ್ಷದ ಬರಗಾಲ ತೀವ್ರ ನಷ್ಟ ಉಂಟಾಗಿ ಸಾಲ ಮಾಡಿ ಬಿತ್ತನೆ ಮಾಡಿದ ರೈತನಿಗೆ ಮಳೆ ಬಾರದೆ ಹಿನ್ನೆಲೆ ಮೆಣಸಿನಕಾಯಿ ಬೆಳೆ ಸಂಪೂರ್ಣ ಕುಸಿತ ಕಂಡು ಉತ್ತಮ ಬೆಲೆಯೂ ಸಹ ಇಲ್ಲ ಇತ್ತ ಬೆಳೆಯು ಕೈ ಕೊಟ್ಟು ನಷ್ಟ ಅನುಭವಿಸುವಂತಾಗಿದೆ .

ಮಾರುಕಟ್ಟೆಯಲ್ಲಿ ಮೆಣಸಿನಕಾಯಿಗೆ ಹೆಚ್ಚಿದ ಬೇಡಿಕೆ

ಕಳೆದ ವರ್ಷ ರಾಜ್ಯ ಸೇರಿದಂತೆ ಹಲವು ತಾಲ್ಲೂಕುಗಳಲ್ಲಿ ವರುಣನ ಆರ್ಭಟಕ್ಕೆ ಫಸಲಿಗೆ ಬಂದಂತಹ ಬೆಳೆ ಮಳೆಯಿಂದ ಹಾನಿಯಾಗಿ ರೈತರನ್ನು ನಷ್ಟಕ್ಕೆ ಸಿಲುಕಿದ್ದನು ಆದರೆ ಈ ವರ್ಷ ಮಳೆಯು ಇಲ್ಲ ಇತ್ತ ಬೆಳೆಯೂ ಇಲ್ಲದಂತಾಗಿದೆ.

ರೈತ ಹಿತ ಕಾಪಾಡಿ

ಕಳೆದ ವರ್ಷ ಹೆಚ್ಚಿನ ಮಳೆಯಾಗಿ ಬೆಳೆಗಳು ಹಾನಿಗೆ ಒಳಗಾಗಿತ್ತು,ಈ ವರ್ಷವು ಸಹ ಮಳೆ ಕೈಕೊಟ್ಟು ಬರಗಾಲದ ಹಿನ್ನೆಲೆಯಲ್ಲಿ ಮುಂಗಾರು ಹಂಗಾಮಿನ ಬೆಳೆಗಳು ಹಾಗೂ ಹಿಂಗಾರು ಹಂಗಾಮಿನ ಬೆಳೆಗಳು ಕಮರಿ ಹೋಗಿದ್ದು ರೈತರು ಈ ಬಾರಿ ಸಾಕಷ್ಟು ನಷ್ಟವನ್ನು ಅನುಭವಿಸುತ್ತಿದ್ದಾನೆ .

ಜಿಲ್ಲಾದ್ಯಂತ ಶೇಕಡ 80 ರಿಂದ 85 ರಷ್ಟು ಮಳೆ ಕೊರತೆ ಕಂಡು ಬಂದಿದೆ ಬೆಳೆ ನಷ್ಟ ಹಾನಿ ಪರಿಹಾರ ಹಾಗೂ ಬೆಳೆ ವಿಮೆ ಹಣವನ್ನು ಮಧ್ಯಂತರ ಪರಿಹಾರವನ್ನು ಮಾತ್ರ ಜಮಾವಣೆ ಮಾಡಿ ಜಿಲ್ಲಾಧಿಕಾರಿಗಳು ಕೈ ತೊಳೆದುಕೊಂಡು ಬಿಟ್ಟಿದ್ದಾರೆ.
ಬೇಗನೆ ಪೂರ್ಣ ಪ್ರಮಾಣದ ಪರಿಹಾರದ ಹಣವನ್ನು ರೈತರ ಬ್ಯಾಂಕ್ ಖಾತೆಗೆ ಜಮಾವಣೆ ಮಾಡಬೇಕೆಂದು ಎಂದು ರೈತ ಸಂಘದ ಗದಗ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್ ಬಾಬರಿ ಆಗ್ರಹಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ