ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತಾಲ್ಲೂಕು ಆಡಳಿತದಿಂದ ಕಾಯಕ ಶರಣರ ಜಯಂತಿ

ಭದ್ರಾವತಿ: ಸಾಧು–ಸತ್ಪುರುಷರ,ಮಹಾತ್ಮರ,ಆದರ್ಶ ಪುರುಷರ ಜಯಂತಿಗಳು ಆಚರಣೆಗೆ ಮಾತ್ರ ಸೀಮಿತವಾಗಬಾರದು.ದಿನನಿತ್ಯದ ಬದುಕಿನಲ್ಲಿ ಮಾರ್ಗದರ್ಶಕವಾಗಬೇಕು ಅವರು ನಡೆದ ದಾರಿ, ನುಡಿದ ಮಾತು ನಮಗೆ ಮಾದರಿ ಆಗಬೇಕು ಎಂದು ಉಪ ತಹಶೀಲ್ದಾರ್ ರಾಧಾಕೃಷ್ಣ ಭಟ್ ತಿಳಿಸಿದರು.
ತಾಲ್ಲೂಕು ಆಡಳಿತದ ವತಿಯಿಂದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಯಕ ಶರಣರ ಜಯಂತ್ಯೂತ್ಸವದಲ್ಲಿ ಕಾಯಕ ಯೋಗಿ ಬಸವಣ್ಣ ನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ನುಡಿ ನಮನ ಸಲ್ಲಿಸಿ ಮಾತನಾಡಿದರು.
ಉಪ ತಹಶೀಲ್ದಾರ್ ಮಂಜಾನಾಯ್ಕ ರವರು ಮಾತನಾಡಿ,ಆಧ್ಯಾತ್ಮಿಕ ಅನುಭವದ ಭವನ(ಅನುಭವ ಮಂಟಪ)ದಲ್ಲಿ ಎಲ್ಲಾ ಸಾಮಾಜಿಕ, ಆರ್ಥಿಕ ನ್ಯಾಯದೊಂದಿಗೆ ಪುರುಷ ಮತ್ತು ಮಹಿಳೆಯರಿಗೂ ಸಮಾನತೆ ನೀಡಲಾಗಿತ್ತು.ಕಾಯಕ ಶರಣರಾದ ಬಸವಣ್ಣ,ಮಾದಾರ ಚನ್ನಯ್ಯ,ಮಾದಾರ ಹರಳಯ್ಯರನ್ನೂ ಒಳಗೊಂಡಂತೆ ಮಹಾನ್ ಪುರುಷರ ಆದರ್ಶಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ರವರುಗಳಾದ ಎ ವಿ ರಾಜ್ ಅರಸ್,ಗಿರಿರಾಜ್ ಮತ್ತು ಕಚೇರಿ ವಿಷಯ ನಿರ್ವಾಹಕ ಅಲೆಕ್ಸ್ ಹಾಗೂ ತಾಲ್ಲೂಕು ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

ವರದಿ:ಕೆ ಆರ್ ಶಂಕರ್ ಭದ್ರಾವತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ