ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಹವಾಲು ಆಲಿಸಿ ಸ್ಥಳದಲ್ಲಿಯೇ ಬಗೆಹರಿಸಿದ ಶಾಸಕರು

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ದಿ 10-2-24 ರಂದು ಮಾನ್ಯಶಾಸಕರು ಮಧ್ಯಾಹ್ನದಿಂದ ರಾತ್ರಿವರೆಗೂ ಹಳ್ಳಿಗಳ ಜನರ ಅಹವಾಲು ಆಲಿಸಿ ಸ್ಥಳದಲ್ಲಿಯೇ ಬಗೆಹರಿಸಿ ದಿನವಿಡೀ ಬಿಡುವು ಇಲ್ಲದೇ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾದ ಶಾಸಕ ಡಾ.ಶ್ರೀನಿವಾಸ್.ಎನ್.ಟಿ. ಅವರು ಕ್ಷೇತ್ರದ ವಿವಿಧ  ಹಳ್ಳಿಗಳಿಂದ ಬಂದ ರೈತರು,ಮಹಿಳೆಯರು,ಕಾರ್ಮಿಕರು,ಹಿಂದುಳಿದವರು, ಅಲ್ಪಸಂಖ್ಯಾತರು,ವಿದ್ಯಾರ್ಥಿಗಳು ಎಲ್ಲಾ ವರ್ಗದ ಬಡವರು,ಮುಖಂಡರು ಮತ್ತು ಕಾರ್ಯಕರ್ತರ ಅಹವಾಲು ಆಲಿಸಿ ಸ್ಥಳದಲ್ಲಿಯೇ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಸೂಚಿಸಿದರು.ತಡರಾತ್ರಿವರೆಗೂ ಕೂಡ್ಲಿಗಿ ಕ್ಷೇತ್ರದ ವಿವಿಧ ಕಾರ್ಯಕ್ರಮಗಳಲ್ಲಿ ಶಾಸಕರು ಭಾಗವಹಿಸಿ ಹಗಲು-ರಾತ್ರಿಯನ್ನು ಲೆಕ್ಕಿಸದೇ  ನಿಮ್ಮೊಂದಿಗೆ ನಾನು ಇದ್ದೇನೆ ಎಂಬ ಆತ್ಮ ವಿಶ್ವಾಸ ಮೂಡಿಸಿ ಪ್ರತಿಯೊಬ್ಬರ ಪ್ರೀತಿಗೆ ಪಾತ್ರರಾಗಿರುವುದನ್ನು ಮರೆಯುವಂತಿಲ್ಲ.ದಿನವಿಡೀ ವಿವಿಧ ಕಡೆ ಅಭಿವೃದ್ಧಿಗಾಗಿ ಹಾಕಿಕೊಂಡ ನೂರಾರು ಯೋಜನೆಗಳ ಪ್ರತಿಯೊಂದು ಅಂಕಿ-ಅಂಶ ವಿಚಾರಗಳನ್ನು ಸಮೇತ ಎಳೆ ಎಳೆಯಾಗಿ ಜನರ ಮುಂದೆ ತೆರದಿಟ್ಟರು.ಈ ಸಂದರ್ಭದಲ್ಲಿ ಆಯಾ ಭಾಗದ ಮುಖಂಡರು ಉಪಸ್ಥಿತರಿದ್ದರು.

ವರದಿ-ಅಂಗಡಿ ಶಶಿಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ