ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರತಿಯೊಬ್ಬರೂ ಪ್ರಾಣಿ ಪಕ್ಷಿಗಳಿಗೆ ನೀರಿನ ಅರವಟ್ಟಿಗೆಗಳನ್ನು ಅಳವಡಿಸಲು ಮುಂದಾಗಬೇಕು:ಅಮರೇಗೌಡ ಮಲ್ಲಾಪುರ

ರಾಯಚೂರು:ಆಶಿಹಾಳ ತಾಂಡಾ ಭಾರತ ರತ್ನ ಡಾ:ಬಿ,ಆರ್ ಅಂಬೇಡ್ಕರ್ ವಸತಿ ನಿಲಯ ಶಾಲೆಯಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಸಸಿ ನೆಡುವ ಕಾರ್ಯಕ್ರಮ ನೆರವೇರಿತು.
ಲಿಂಗಸೂಗೂರು ತಾಲೂಕಿನ ಆಶಿಹಾಳ ತಾಂಡಾದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಬೇಸಿಗೆಯಲ್ಲಿ ಗಿಡಮರಗಳ ರಕ್ಷಣೆ ಮಾಡುವ ಉದ್ದೇಶದಿಂದ ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಲು ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಸಸಿನೆಟ್ಟು ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಕರ್ನಾಟಕ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ರಾಜ್ಯಾಧ್ಯಕ್ಷ ಅಮರೇಗೌಡ ಮಲ್ಲಾಪುರ ಅವರು ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ,ಪರಿಸರವನ್ನು ನಾವು ರಕ್ಷಣೆ ಮಾಡಿದರೆ ಪರಿಸರ ನಮ್ಮನ್ನು ರಕ್ಷಣೆ ಮಾಡುತ್ತದೆ.ಕಾರಣ ಎಲ್ಲಾ ವಿದ್ಯಾರ್ಥಿಗಳು ಇದನ್ನ ಮನವರಿಕೆ ಮಾಡಿಕೊಂಡು ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು ಮತ್ತು ಈಗಾಗಲೇ ನಮ್ಮ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯ ಪ್ರಮಾಣ ಅತ್ಯಂತ ಕಡಿಮೆಯಾಗಿದ್ದು,ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಗಿಡಮರಗಳು ಒಣಗುತ್ತಿವೆ.ಪ್ರಾಣಿ ಪಕ್ಷಿಗಳಿಗೂ ನೀರಿನ ದಾಹ ಹೆಚ್ಚಾಗುತ್ತಿದೆ ಪ್ರತಿಯೊಬ್ಬರೂ ದಿನನಿತ್ಯ ಗಿಡಮರಗಳಿಗೆ ನೀರುಣಿಸಬೇಕು,ಪ್ರಾಣಿ ಪಕ್ಷಿಗಳಿಗೆ ನೀರಿನ ಅರವಟ್ಟಿಗೆಗಳನ್ನು ಅಳವಡಿಸಲು ಮುಂದಾಗಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಾಲೆಯ ಸಹ ಶಿಕ್ಷಕಿಯಾದ ಶ್ರೀಮತಿ ಗೀತಾ ರೂಪಸಿಂಗ್ ನಾಯಕ ಅವರ ಪುತ್ರ ಪ್ರೀತಮ್ ನಾಯಕ ಅವರು ಮೊದಲನೆ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು.ನಂತರ ಶಾಲೆಯ ಆವರಣದಲ್ಲಿ ಹಲವಾರು ವಿವಿಧ ರೀತಿಯ ಸಸಿಗಳನ್ನು ನೆಡಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರುಗಳಾದ ಅಮರೇಶ,ಪರಿಸರ ಪ್ರೇಮಿ ಮೌನೇಶ ರೈತನಗರ ಕ್ಯಾಂಪ್,ಶಿಕ್ಷಕರಾದ ಮೈನುದ್ದೀನ್, ಚಿತ್ರಶೇಖರ,ರೂಪಾಸಿಂಗ್,ವಿಕ್ರಮ್ ಹಾಗೂ ವಿದ್ಯಾರ್ಥಿಗಳು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ