ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಆರೋಪಿಯನ್ನು ಗುರುತಿಸಿದ್ದು,ಶೀಘ್ರದಲ್ಲೇ ಅವರನ್ನು ವಶಕ್ಕೆ ಪಡೆಯಲಾಗುವುದು:ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್ ಕುಮಾ‌ರ್

ಶಿರಾಳಕೊಪ್ಪ ಪಟ್ಟಣದ ಬಸ್‌ ನಿಲ್ದಾಣದ ಬಳಿಯಲ್ಲಿ ಸ್ಪೋಟ ಸಂಭವಿಸಿದ ಪ್ರಕರಣದಲ್ಲಿ ಒಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,ಅಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್ ಕುಮಾ‌ರ್ ಹೇಳಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಮಾಹಿತಿ ಬಿಡುಗಡೆ ಮಾಡಿರುವ ಅವರು,ಸ್ಪೋಟ ಯಾವುದರಿಂದ ಸಂಭವಿಸಿದೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಸುದ್ದಿ ಹಬ್ಬಿರುವಂತೆ ಅಲ್ಲಿ ದೊರೆತ ಬ್ಯಾಗ್‌’ನಲ್ಲಿ ಯಾವುದೇ ರೀತಿಯ ಒಲೆ ದೊರೆತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಉಮೇಶ್ ಹಾಗೂ ಅವರ ಪತ್ನಿ ರೂಪಾ ಎನ್ನುವವರು ಸಂತೆಗಾಗಿ ಪಟ್ಟಣಕ್ಕೆ ಬಂದಿದ್ದಾರೆ.ಈ ದಂಪತಿ ಅಲ್ಲಿ ರಸ್ತೆ ಬದಿಯಲ್ಲಿ ಬ್ಲಾಂಕೆಟ್/ಕಂಬಳಿಯೊಂದನ್ನು ಖರೀದಿಸಿದ್ದಾರೆ.ಮಾರಾಟ ಮಾಡಿದ ವ್ಯಕ್ತಿ ಆಂಟೋನಿ ಹಾಗೂ ಈ ದಂಪತಿ ಪರಿಚಯದವರಾಗಿದ್ದಾರೆ ಸಂತೆಯಲ್ಲಿ ಖರೀದಿ ಮಾಡಿ ಬರುತ್ತೇವೆ,ಅರ್ಧ ಗಂಟೆ ಬ್ಯಾಗ್ ಇಲ್ಲೇ ಇರಲಿ ಎಂದು ಹೇಳಿ ಬ್ಯಾಗ್‌ ಇಟ್ಟು ತೆರಳಿದ್ದಾರೆ.ಅಲ್ಲಿಟ್ಟಿದ್ದ ಬ್ಯಾಗ್‌’ನಿಂದ ಕೆಲ ಸಮಯದ ನಂತರ ಸ್ಪೋಟ ಸಂಭವಿಸಿದೆ ಎಂದು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಂತೆ ಕಾಡು ಹಂದಿಗಳಿಗೆ ಸಿಡಿಸುವ ಸಿಡಿ ಮದ್ದನ್ನು ಆ ಬ್ಯಾಗ್‌’ನಲ್ಲಿ ಇಟ್ಟಿದ್ದರು ಎಂದು ತಿಳಿದುಬಂದಿದೆ ಪ್ರಕರಣದ ಆರೋಪಿಯನ್ನು ಗುರುತಿಸಿದ್ದು,ಶೀಘ್ರದಲ್ಲೇ ಅವರನ್ನು ವಶಕ್ಕೆ ಪಡೆಯಲಾಗುವುದು ತನಿಖೆ ಪ್ರಗತಿಯಲ್ಲಿದೆ ಎಂದಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ