ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಾಗುವಳಿ ಚೀಟಿ ವಿತರಣೆ ಬಗರ್ ಹುಕುಂ:ಉಳಿದ ರೈತರಿಗೂ ಶೀಘ್ರವೇ ಸಾಗುವಳಿ ಚೀಟಿ ಶಾಸಕ ಡಿಜಿ ಶಾಂತನಗೌಡ

ಹೊನ್ನಾಳಿ:ಕಳೆದ 50 ವರ್ಷಗಳಿಂದ
ಜಮೀನು ಉಳುಮೆ ಮಾಡಿಕೊಂಡು ಬರುತ್ತಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಲು ಸಂತಸವಾಗುತ್ತಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.
ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ತಾಲ್ಲೂಕಿನ ಹನುಮಸಾಗರ ಗ್ರಾಮದ ಸರ್ಕಾರಿ ಇನಾಂ ಜಮೀನಿನ ಸರ್ವೇ ನಂ.122ರಲ್ಲಿ ಸಾಗುವಳಿ ಮಾಡುತ್ತಿದ್ದ 64 ರೈತರಿಗೆ ಶನಿವಾರ ಸಾಗುವಳಿ ಚೀಟಿ ವಿತರಿಸಿ ಮಾತನಾಡಿದ ಅವರು,ಯಾರು ಅರ್ಹ ಫಲಾನುಭವಿಗಳಿದ್ದಾರೋ ಅಂಥವರಿಗೆ ಸರ್ಕಾರದ ಸೌಲಭ್ಯಗಳು ಸಿಗಬೇಕು ಎನ್ನುವುದೂ ನನ್ನ ಆಶಯ’ ಎಂದರು.
‘ನೀವು ಪಟ್ಟ ಶ್ರಮಕ್ಕೆ ಇದೀಗ ಪ್ರತಿಫಲ ಸಿಕ್ಕಿದೆ.ಇದನ್ನು ಯಾರಿಗೂ ಕ್ರಯಕ್ಕೆ ಕೊಡದೇ ಉಳುಮೆ ಮಾಡಿಕೊಂಡು ಹೋಗಬೇಕು.ಇದು ನಿಮ್ಮ ಮುಂದಿನ ಪೀಳಿಗೆಯವರೆಗೂ ಇರುವಂತೆ ನೋಡಿಕೊಳ್ಳಬೇಕು’ ಎಂದ ಅವರು,ಈಗ ಒಂದಡಿ ಜಾಗ ಸಿಗುವುದೂ ಕಷ್ಟ, ಅಂಥದ್ದರಲ್ಲಿ ನಿಮಗೆ ಈಗ ಸರ್ಕಾರ ಜಮೀನು ನೀಡಿದೆ ಎಂದರು.
ಬಾಕಿ ಇರುವ ರೈತರಿಗೂ ಕಾನೂನಿನ ತೊಡಕು ನಿವಾರಿಸಿಕೊಂಡು ಆದಷ್ಟು ಬೇಗ ಸಾಗುವಳಿ ಚೀಟಿ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಶಾಸಕರ 64 ಜನ ಹಕ್ಕುಪತ್ರ ಆತ್ಮವಿಶ್ವಾಸ ಪರಿಶ್ರಮದಿಂದ ಸಾಗುವಳಿದಾರರಿಗೆ ಸಿಕ್ಕಿದೆ.ಯಾರೂ ಕಳೆದುಕೊಳ್ಳಬಾರದು ಎಂದು ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ಹೇಳಿದರು.ಸಾಗುವಳಿದಾರರು ಮಳೆಗಾಳಿ ಚಳಿ ಎನ್ನದೇ ಗುಡ್ಡಗಾಡು ಪ್ರದೇಶದಲ್ಲಿನ ಸರ್ಕಾರಿ ಭೂಮಿಯನ್ನು ಹದ ಮಾಡಿಕೊಂಡು ಬೆಳೆ ಬೆಳೆಯುತ್ತಿದ್ದೀರಿ.ಶ್ರಮದ ಪ್ರತಿಫಲವಾಗಿ ನಿಮಗೆ ಹಕ್ಕುಪತ್ರ ಸಿಕ್ಕಿದೆ.ಇದಕ್ಕಿಂತ ಸಂತೋಷದ ವಿಚಾರ ಬೇರೆ ಏನಿದೆ’ ಎಂದರು.
ತಾಲ್ಲೂಕಿನ ಹನುಮಸಾಗರ ಗ್ರಾಮದ ಸರ್ವೇ ನಂ. 122ರಲ್ಲಿದ್ದ 360 ಎಕರೆ ಸರ್ಕಾರಿ ಜಮೀನಿನಲ್ಲಿ 201 ರೈತರು ಸಾಗುವಳಿ ಮಾಡುತ್ತಿದ್ದರು.ಅವರಲ್ಲಿ ಈಗ 64 ರೈತರಿಗೆ ಸಾಗುವಳಿಳಿ ಚೀಟಿ ನೀಡಿದ್ದೇವೆ.ಬಾಕಿ 187 ನ ಸಾಗುವಳಿದಾರರಿಗೂ ಶೀಘ್ರವೇ ಹಕ್ಕುಪತ್ರ ನೀಡಲಾಗುವುದು ಎಂದು ತಹಶೀಲ್ದಾರ್ ಪಟ್ಟರಾಜಗೌಡ ಹೇಳಿದರು.
ಬಗ‌ರ್ ಹುಕುಂ ಸಮಿತಿ ಸದಸ್ಯರಾದ ಸಣ್ಣಕ್ಕಿ ಬಸವನಗೌಡ,ಕೊಡತಾಳ್ ರುದ್ರೇಶ್,ಪುಷ್ಪಾ ರವೀಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಡಿ.ಜಿ.ವಿಶ್ವನಾಥ್, ಮುಖಂಡರಾದ ಎಚ್‌.ಬಿ.ಶಿವಯೋಗಿ,ಬಿ.ಸಿದ್ದಪ್ಪ, ಎಚ್ ಕೆ ಉಮಾಪತಿ ಸೇರಿದಂತೆ ಫಲಾನುಭವಿಗಳು ಇದ್ದರು.

ವರದಿ-ಪ್ರಭಾಕರ ಡಿ ಎಂ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ