ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಾರಮ್ಮನಹಳ್ಳಿ ಶ್ರೀ ಬೊಮ್ಮಲಿಂಗೇಶ್ವರ ಜಾತ್ರಾ ಮಹೋತ್ಸವ:ನಾಡಿನ ಜನತೆಯ ಒಳಿತಿಗಾಗಿ ಪೂಜೆ ಸಲ್ಲಿಸಿ ಬರನಿರ್ವಹಣೆಗಾಗಿ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಂಡಿದ್ದೇನೆ-ಶಾಸಕ ಡಾ. ಶ್ರೀನಿವಾಸ್.ಎನ್.ಟಿ. 

ಕೂಡ್ಲಿಗಿ ತಾಲೂಕಿನ ಮಾರಮ್ಮಹಳ್ಳಿ ಗ್ರಾಮದಲ್ಲಿ ಶ್ರೀ ಬೊಮ್ಮಲಿಂಗೇಶ್ವರ ಜಾತ್ರಾ ಮಹೋತ್ಸವಕ್ಕೆ  ಮಾನ್ಯಶಾಸಕರಾದ ಡಾ. ಶ್ರೀನಿವಾಸ್ ಎನ್.ಟಿ.ಅವರು ದಿನಾಂಕ 01-03-24 ರಂದು ಭೇಟಿ ನೀಡಿ ನಾಡಿನ ಜನತೆಯ ಒಳಿತಿಗಾಗಿ ಭಕ್ತಿ ಭಾವದಿಂದ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದರು.‌ಹಳ್ಳಿಗಳು,ಕೇರಿಗಳು ನನ್ನ ಕನಸು ಮನಸ್ಸಲ್ಲಿ ಜೀವಂತವಾಗಿವೆ ತಾವುಗಳು “ಎಲ್ಲಿ ಕಳೆದುಕೊಂಡಿರಿ ಅಲ್ಲಿ ಹುಡುಕಿಕೊಂಡಿದ್ದೀರಿ ” ಅನ್ನುವುದು ಹೆಮ್ಮೆಯ ವಿಷಯ.  
ದಶಕಗಳಿಂದ ಗುಡೇಕೋಟೆ ಹಾಗೂ ಖಾನಹೊಸಹಳ್ಳಿ ಭಾಗದ ಬಹುತೇಕ ಹಳ್ಳಿಗಳು ಅಭಿವೃದ್ಧಿಯಿಂದ ಹಿಂದುಳಿದಿರುವುದು ನನ್ನ ಗಮನಕ್ಕೆ ಇದೆ. 
ಈ ಬಾರಿ ಬರಗಾಲ ತೀವ್ರವಾಗಿ ಇರುವುದರಿಂದ ಪ್ರತಿಯೊಂದು ವಿಚಾರದಲ್ಲಿ ಸೂಕ್ಷ್ಮವಾಗಿ ಕಾಳಜಿ ವಹಿಸಿ ಕೆಲಸ ಮಾಡುತ್ತೇನೆ.ಜಾನುವಾರುಗಳಿಗೆ ಮತ್ತು ದೇವರ ಎತ್ತುಗಳಿಗೆ ಗೋ ಶಾಲೆಗಳ ಮೂಲಕ  ಗುಣಮಟ್ಟದ ಮೇವು ನೀರು ಒದಗಿಸಿಕೊಡುವುದಾಗಿ ತಿಳಿಸಿದರು. ಸಮಾಜಿಕ ನಾಟಕ  ಕಲೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ ಆರ್ಥಿಕ ನೆರವು ನೀಡಿ ಪ್ರೋತ್ಸಾಹಿಸಿದರು.‌ ಆಯಾ ಹೋಣಿ ಮತ್ತು ಕೇರಿ ಸುತ್ತಿ ಊರಿನ ಮುಖಂಡರ ಕಷ್ಟ-ಸುಖ ವಿಚಾರಿಸಿರು.‌ಈ ವೇಳೆ ವಿವಿಧ ಮುಖಂಡರು ಉಪಸ್ಥಿತರಿದ್ದರು.

ವರದಿ ಅಂಗಡಿ ಶಶಿಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ