ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವೈಜ್ಞಾನಿಕ ಚಿಂತನೆಗಳನ್ನು ಬೆಳಸಿಕೊಳ್ಳಿ:ಬಿಇಒ ಸೋಮಶೇಖರಗೌಡ

ಸಿಂಧನೂರು:ಬಹಳ ಹಿಂದಿನಿಂದ ಬಂದಿರುವ ಕೆಲವು ಮೂಢನಂಬಿಕೆ,ಆಚರಣೆಗಳನ್ನು ಬಿಟ್ಟು ವೈಜ್ಞಾನಿಕ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಕರೆ ನೀಡಿದರು.
ಅವರು ನಗರದ ಆರ್.ಜಿ.ಎಮ್.ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ರಾಯಚೂರು,ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ರಾಯಚೂರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಿಂಧನೂರು ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ವಿವಿಧ ವೈಜ್ಞಾನಿಕ ತರಬೇತಿ ಮತ್ತು ವಿಜ್ಞಾನ ಜಾಗೃತಿ’ ಕಾರ್ಯಕ್ರಮದ ಅಂಗವಾಗಿ ‘ವಿದ್ಯಾರ್ಥಿಗಳಿಗಾಗಿ ವೈಜ್ಞಾನಿಕ ಮನೋಭಾವ ಮತ್ತು ಉದ್ವೇಗವನ್ನು ಅಭಿವೃದ್ಧಿಪಡಿಸುವ ಕಾರ್ಯಕ್ರಮ’ಉದ್ಘಾಟಿಸಿ ಮಾತನಾಡುತ್ತಾ,ನಾವು ಯಾವುದನ್ನು ಪ್ರಶ್ನೆ ಮಾಡದೇ ಒಪ್ಪಿಕೊಳ್ಳಬಾರೆಂದು ಗೌತಮ ಬುದ್ಧರು ಹೇಳಿದ್ದಾರೆ.ವಿಜ್ಞಾನವೂ ಸಹ ಇದನ್ನೇ ಹೇಳುತ್ತದೆ. ಪ್ರತಿಯೊಂದು ಕ್ರಿಯೆಗೆ ಕಾರ್ಯ-ಕಾರಣ ಸಂಬಂಧವಿರುತ್ತದೆ ಎನ್ನುವುದನ್ನು ನಾವು ಮನಗಾಣಬೇಕು,ಪವಾಡ,ಅತಿಂದ್ರೀಯ ಶಕ್ತಿ ಎನ್ನುವುದಕ್ಕೆ ಯಾವುದೇ ಆಧಾರಗಳಿಲ್ಲ.ಪರಿಸರದಲ್ಲಿ ಏನೇ ಘಟಿಸಿದರೂ ವಿಜ್ಞಾನದ ತಳಹದಿಯ ಮೇಲೆಯೇ ಸಂಭವಿಸುತ್ತದೆ ಎನ್ನುವುದನ್ನು ನಾವು ಯಾರೂ ಮರೆಯಬಾರದು.ಇಂದಿನ ವಿದ್ಯಾರ್ಥಿ-ಯುವಜನರು ಸಂವಿಧಾನದ ಆಶಯದಂತೆ ವೈಜ್ಞಾನಿಕ ಮನೋಭಾವನೆಯನ್ನು ಅಳವಡಿಸಿಕೊಂಡು ಕರ್ತವ್ಯ ಪಾಲಿಸಬೇಕೆಂದು ಸಲಹೆ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾದ ಬಳ್ಳಾರಿ ಜಿಲ್ಲೆಯ ಮೋಕಾ ಕೆ.ಪಿ.ಎಸ್.ಶಾಲೆಯ ಎಸ್.ಎಂ.ಹಿರೇಮಠ ಅವರು ವಿಜ್ಞಾನ ಗೀತೆಗಳ ಕರಿತು ಉಪನ್ಯಾಸ ಮಾಡಿ ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವಿಜಯನಗರ ಜಿಲ್ಲೆಯ ಪೂಜಾರಹಳ್ಳಿ ಪ್ರೌಢಶಾಲೆಯ ನವೀನಕುಮಾರ ಮತ್ತು ಸಿಂಧನೂರು ಜ್ಞಾನಜ್ಯೋತಿ ಪ.ಪೂ.ಕಾಲೇಜಿನ ಉಪನ್ಯಾಸಕ ಸುರೇಶ ‘ವೈಜ್ಞಾನಿಕ ಮನೋಭಾವನೆ’ ಕುರಿತು ಉಪನ್ಯಾಸ ನೀಡಿ, ಭಾಗವಸಿದ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ವೇದಿಕೆಯ ಮೇಲೆ ಕ್ಷೇತ್ರ ಸಮನ್ವಯಾಧಿಕಾರಿ ಬಸಲಿಂಗಪ್ಪ,ಶಾಲೆಯ ಮುಖ್ಯಗುರು ಪಾಂಡುರಂಗ ದೇಸಾಯಿ,ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಮಲ್ಲಪ್ಪ,ತಾಲೂಕಾ ನೋಡಲ್ ಅಧಿಕಾರಿ ರವಿ ಪವಾರ,ವಿಜ್ಞಾನ ವೇದಿಕೆಯ ಅಧ್ಯಕ್ಷ ಮಲ್ಲಿಕಾರ್ಜುನ ಜೆಟ್ಟೇರ,ಬಿ.ಆರ್.ಪಿ.ಮೈನುದ್ದೀನ್,ಸಿ,ಆರ್.ಪಿಗಳಾದ ಬಸವರಾಜ ಅಂಗಡಿ,ಚನ್ನವೀರಗೌಡ,ಪ್ರಮೋದ, ಹನುಮಂತ,ವಿಜ್ಞಾನ ಶಿಕ್ಷಕರಾದ ದುರ್ಗಾಪ್ರಸಾದ, ಫಯಾಜ್,ಮಂಜುನಾಥ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ