ಗದಗ ತಾಲ್ಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ರಾಷ್ಟ್ರೀಯ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಇಂದು ಲಸಿಕಾ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ಗದಗ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್ ಬಾಬರಿ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿ ಅವರು ಭಾರತವು ಪೋಲಿಯೋ ಮುಕ್ತ ದೇಶವಾಗಿದೆ ಆದರೆ ನೆರೆ ಹೊರೆಯ ದೇಶಗಳಲ್ಲಿ ಇನ್ನೂ ಪೋಲಿಯೋ ಇದೆ ಅದು ನಮ್ಮಲ್ಲಿಯೂ ಮತ್ತೆ ಮರುಕಳಿಸುಬಹು ಎಂಬ ಉದ್ದೇಶದಿಂದ ಪೋಲಿಯೋ ಲಸಿಕೆಯನ್ನು ಹಾಕಲಾಗುತ್ತದೆ.
2011 ರಿಂದ ದೇಶದಲ್ಲಿ ಯಾವುದೇ ಒಂದು ಪೋಲಿಯೋ ಪ್ರಕರಣ ಕಂಡು ಬಂದಿಲ್ಲ ಹೀಗಾಗಿ ಭಾರತ ದೇಶವು ಪೋಲಿಯೋ ಮುಕ್ತವಾಗಿದೆ ಎಂದು ಹೇಳಿದರು.
ಆದ್ದರಿಂದ ನಿಮ್ಮ ಮಗುವಿನ ಸಂಪೂರ್ಣ ರಕ್ಷಣೆಯನ್ನು ಖಚಿತಪಡಿಸಲು 5 ವರ್ಷದೂಳಗಿನ ನಿಮ್ಮ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸಿ ಮುಂದೆ ಬರಬಹುದಾದ ಅಂಗವಿಕಲತೆಯನ್ನು ತಡೆಯಾಣ ಪೋಲಿಯೋ ವಿರುದ್ಧ ಜಯ ಸಾಧಿಸುವದನ್ನು ಮುಂದೆವರೆಸೋಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಹಾಯಕ ವೈದ್ಯ ಮುತ್ತಣ್ಣ ಹಟ್ಟಿಮನಿ ಮಾತನಾಡಿ ಅಂಗನವಾಡಿ ನಮ್ಮ ಗ್ರಾಮದಲ್ಲಿ ಮೂರು ಅಂಗನವಾಡಿ ಕೇಂದ್ರಗಳಿವೆ ಈ ಮೂರು ಕೇಂದ್ರಗಳಲ್ಲಿ ಸುಮಾರು 385 ಮಕ್ಕಳ ಇದು ಈ ಎಲ್ಲಾ ಮಕ್ಕಳಿಗೂ ಪೋಲಿಯೋ ಹನಿ ಹಾಕುತ್ತೇವೆ ಈ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ಮೂರು ದಿನಗಳ ಕಾಲ ನಡೆಯುತ್ತದೆ ಯಾವ ಮಕ್ಕಳು ಅಂಗನವಾಡಿ ಕೇಂದ್ರಕ್ಕೆ ಬಂದಿರುವುದಿಲ್ಲ ಅವರಿಗೆ ಮನೆ ಮನೆಗೆ ತೆರಳಿ ಪೋಲಿಯೋ ಹನಿ ಹಾಕುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಹಾಯಕ ವೈದ್ಯರಾದ ಗಂಗಮ್ಮ ಕುಂಬಾರ,ಸುಶ್ಮಿತಾ ಪೀಟರ್ ಹಾಗೂ ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮಿ ವ್ಹಿ ಇದ್ಲಿ,ಶಂಕ್ರಮ್ಮ ಕೋತಬಾಳ, ವಿದ್ಯಾ ಇದ್ಲಿ,ಆಶಾ ಕಾರ್ಯಕರ್ತೆಯರಾದ ವಿಜಯಲಕ್ಷ್ಮೀ ಉಂಡಿ,ಶಾರವ್ವ ಗೋಂದಿ ಹಾಗೂ ಮಕ್ಕಳು ಪಾಲ್ಗೊಂಡಿದ್ದರು.




















