ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರತಿ ಶಾಲೆಯಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚನೇಯಾಗಲಿ:ನ್ಯಾ.ನೇರಳೆ ವೀರಭದ್ರಯ್ಯ ಭವಾನಿ

ಚಿಕ್ಕಬಳ್ಳಾಪುರ:ಶಾಲಾ ಮಕ್ಕಳ ಸುರಕ್ಷತೆ ಹಾಗೂ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವ ದೃಷ್ಟಿಯಿಂದ ಸರ್ಕಾರದ ಆದೇಶದಂತೆ ಪ್ರತಿ ಶಾಲೆಯಲ್ಲಿಯೂ ಕಡ್ಡಾಯವಾಗಿ ಮಕ್ಕಳ ರಕ್ಷಣಾ ಸಮಿತಿಗಳನ್ನು ರಚಿಸಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ನೇರಳೆ ವೀರಭದ್ರಯ್ಯ ಭವಾನಿ ಅವರು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ವಕೀಲರ ಸಂಘ,ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಶನಿವಾರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ಪಂಚಾಯಿತಿ ಮತ್ತು ಶಾಲಾ ಮಟ್ಟದಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚನೆಯ ಬಗ್ಗೆ ಕಾನೂನು ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮನೆಯಿಂದ ಸುರಕ್ಷಿತವಾಗಿ  ಶಾಲೆಗೆ ಹೋದ ಮಕ್ಕಳು ಶಾಲೆಯಿಂದಲೂ ಅಷ್ಟೇ ಸುರಕ್ಷಿತವಾಗಿ ಬರಬೇಕು. ಮಕ್ಕಳು ಶಾಲೆಯಲ್ಲಿರುವ ಅವಧಿಯಲ್ಲಿ ಅವರಿಗೆ ಏನೇ ತೊಂದರೆ ಅಥವಾ ಸಮಸ್ಯೆಯಾದರೂ ಅವರು ಶಾಲೆಯಲ್ಲಿ ಮುಕ್ತವಾಗಿ ಹೇಳಿಕೊಳ್ಳುವಂತಿರಬೇಕು ಮಕ್ಕಳ ಸುರಕ್ಷತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲಾ ಶಾಲೆಗಳಲ್ಲಿಯೂ ಮಕ್ಕಳ ರಕ್ಷಣಾ ಸಮಿತಿಗಳನ್ನು ರಚಿಸುವಂತೆ 1990 ರಲ್ಲಿಯೇ ಸುತ್ತೋಲೆ ಹೊರಡಿಸಿದೆ.ಆದರೆ,ಸರ್ಕಾರದ ಆದೇಶವನ್ನು ಶಾಲೆಗಳು ಪಾಲಿಸುತ್ತಿಲ್ಲ.ಯಾವುದೇ ಶಾಲೆಗಳಲ್ಲಿ ಮಕ್ಕಳ ರಕ್ಷಣಾ ಸಮಿತಿಗಳು ರಚನೆಯಾಗಿಲ್ಲ.ಇದು ನಿಜಕ್ಕೂ ಬೇಸರದ ಸಂಗತಿಯಾಗಿದೆ.ಮಕ್ಕಳು ತಮಗೆ ಆದ ತೊಂದರೆಯನ್ನು ಯಾರೊಂದಿಗೆ ಹೇಳಿಕೊಳ್ಳಬೇಕು ಮಕ್ಕಳು ಮುಕ್ತ ಮತ್ತು ನಿರ್ಭಯ ವಾತಾವರಣದಲ್ಲಿ ಅತ್ಯಂತ ಸುರಕ್ಷಿತವಾಗಿ ಇರಬೇಕು. ಆದ್ದರಿಂದ ಎಲ್ಲಾ ಶಾಲೆಗಳಲ್ಲಿ ಮಕ್ಕಳ ರಕ್ಷಣಾ ಸಮಿತಿಗಳನ್ನು ಕಡ್ಡಾಯವಾಗಿ ಮತ್ತು ಆದ್ಯತೆಯ ಮೇಲೆ ರಚಿಸಿ ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು.ಈಗಾಗಲೇ ಸರ್ಕಾರಿ ಕಚೇರಿಗಳಲ್ಲಿ ಮಹಿಳೆಯರ ಸುರಕ್ಷತೆಯ ದೃಷ್ಟಿಯಿಂದ ಸಮಿತಿಗಳನ್ನು ರಚಿಸಲಾಗಿದ್ದು,ಸಮಿತಿಗಳು ಕ್ರಿಯಾಶೀಲವಾಗಿವೆ ಹಾಗೆಯೇ ಮಕ್ಕಳ ವಿಚಾರದಲ್ಲಿಯೂ ಶಾಲೆಗಳಲ್ಲಿ ಸಮಿತಿಗಳು ರಚನೆಯಾಗಬೇಕು ಆ ಮೂಲಕ ಮಕ್ಕಳ ಹಕ್ಕುಗಳು ರಕ್ಷಣೆಯಾಗಬೇಕು.ಸಮಿತಿಗಳು ರಚನೆಯಾಗುವುದರಿಂದ ಮಕ್ಕಳು ಎದುರಿಸುವ ಸಮಸ್ಯೆಗಳನ್ನು ಅರಿಯಲು ಅನುಕೂಲವಾಗುತ್ತದೆ. ಮಕ್ಕಳ ಸಮಸ್ಯೆಗಳು ಶಿಕ್ಷಕರು,ಸರ್ಕಾರಿ ಅಧಿಕಾರಿಗಳು ಮತ್ತು ಪೋಷಕರಿಗೆ ತಿಳಿಯುವ ಅಗತ್ಯವಿದೆ ಈ ನಿಟ್ಟಿನಲ್ಲಿ ಮಕ್ಕಳ ರಕ್ಷಣಾ ಸಮಿತಿಗಳು ಹೆಚ್ಚು ಸಹಕಾರಿಯಾಗಲಿವೆ ಎಂದರು.
ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿ,ಹಿರಿಯ ನಾಗರೀಕರು ಸೇರಿದಂತೆ ಸಾರ್ವಜನಿಕರ ಹಲವು ಸಮಸ್ಯೆಗಳು ಗಮನಕ್ಕೆ ಬಂದ ಕೂಡಲೇ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಸ್ಪಂದಿಸುವಲ್ಲಿ ಸಕ್ರಿಯವಾಗಿದೆ.ಶಾಲಾ ಆಸ್ತಿಗಳ ಒತ್ತುವರಿ ಇನ್ನಿತರ ವಿಚಾರಗಳಲ್ಲಿ ಪ್ರಾಧಿಕಾರ ಹೆಚ್ಚು ಮುತುವರ್ಜಿಯಿಂದ ಕೆಲಸ ಮಾಡಿ ಸಂಬಂಧಪಟ್ಟ ಇಲಾಖೆಗಳಿಗೆ ಸೂಕ್ತ ನಿರ್ದೇಶನವನ್ನೂ ಮಾಡುತ್ತಿದೆ.ಮಕ್ಕಳ ಹಕ್ಕುಗಳ ರಕ್ಷಣೆ ಹಿನ್ನೆಲೆಯಲ್ಲಿ  ಜಿಲ್ಲೆಯ ಪ್ರತಿ ಶಾಲೆಯಲ್ಲಿ ಮಕ್ಕಳ ರಕ್ಷಣಾ ಸಮಿತಿಗಳು ರಚನೆಯಾಗಬೇಕು.ಈ ಸಮಿತಿಗಳ ರಚನೆ ಕುರಿತು ಪಂಚಾಯಿತಿಗಳು, ಶಿಕ್ಷಕರಿಗೇ ಮಾಹಿತಿ ಇಲ್ಲ.ಮಕ್ಕಳ ಮೇಲೆ ಯಾರಿಂದಲೂ ಯಾವುದೇ ರೀತಿಯ ದೌರ್ಜನ್ಯಗಳು ನಡೆಯದಂತೆ ಮುನ್ನೆಚ್ಚರಿಕೆಯಾಗಿ ತಡೆಯುವುದೇ ಸಮಿತಿಗಳ ಮುಖ್ಯ ಧ್ಯೇಯವಾಗಿದೆ ಈಗಾಗಲೇ ಮಿಷನ್ ವಾತ್ಸಲ್ಯ ಎಂಬ ಯೋಜನೆಯಡಿ ಸಾಕಷ್ಟು ಅರಿವು ಮೂಡಿಸಲಾಗುತ್ತಿದ್ದು,ಮಕ್ಕಳ ರಕ್ಷಣೆ ಎಲ್ಲರ ಹೊಣೆ ಎಂಬ ಘೋಷ ವಾಕ್ಯದೊಂದಿಗೆ ಕೆಲಸ ನಡೆಯುತ್ತಿದೆ.ಮಕ್ಕಳ ರಕ್ಷಣೆ ಕೆಲಸ ಮತ್ತಷ್ಟು ಪರಿಣಾಮಕಾರಿಯಾಗಿ ಆಗುವ ಅಗತ್ಯವಿದೆ ಎಂದರು. ಬಾಲ ನ್ಯಾಯನಿಧಿ,ಉಚಿತ  ಮಕ್ಕಳ ಸಹಾಯವಾಣಿ 1098 ಸೇರಿದಂತೆ ಹಲವು ಯೋಜನೆಗಳ ಮೂಲಕ ಮಕ್ಕಳು ಸುರಕ್ಷಿತ ವಾತಾವರಣದಲ್ಲಿ ಬದುಕುವಂತೆ ಮಾಡಬಹುದಾಗಿದೆ.ಮಕ್ಕಳ ಮೇಲೆ ದೌರ್ಜನ್ಯಗಳು ನಡೆಯಬಾರದು ಒಂದು ವೇಳೆ ನಡೆದರೆ ಅದಕ್ಕೆ ಕಾನೂನಿನ ನೆರವನ್ನೂ ಪಡೆದುಕೊಂಡು ಮಕ್ಕಳನ್ನು ರಕ್ಷಿಸಬೇಕಿದೆ.ಎಲ್ಲಿಯೇ ಆಗಲಿ ಮಕ್ಕಳ ಹಕ್ಕುಗಳಿಗೆ ಧಕ್ಕೆಯಾಗುತ್ತಿದ್ದರೆ,ಶೋಷಣೆ ಆಗುತ್ತಿದ್ದರೆ ಗಮನಿಸಿದವರು ಮಕ್ಕಳ ಸಹಾಯವಾಣಿಯನ್ನು ಸಂಪರ್ಕಿಸಿ ಮಾಹಿತಿ ನೀಡುವ ಮೂಲಕ ಸಾಮಾಜಿಕ ಜವಾಬ್ದಾರಿ ತೋರಬೇಕು ಎಂದರು.
ಸಾಮಾಜಿಕ ಜಾಲತಾಣಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳು ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ನಡೆಯುತ್ತಿದೆ. ಪೋಸ್ಟರ್,ವಿಡಿಯೊ ಮತ್ತು ಕಿರುಚಿತ್ರಗಳ ಮುಖಾಂತರ ಮಕ್ಕಳ ಹಕ್ಕುಗಳ ರಕ್ಷಣೆಯ ವಿಚಾರಗಳಲ್ಲಿ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.ಸರ್ಕಾರದ ಈ ಸಾಮಾಜಿಕ ಜಾಲತಾಣಗಳಿಗೆ ಭೇಟಿ ನೀಡಬಹುದು. https:/www.facebook.com/icpskarnataka, https:/www.youtube.com/icpskarnataka             

ಸಂಕಷ್ಟ ಪರಿಸ್ಥಿತಿಯಲ್ಲಿರುವ ಮಕ್ಕಳ ರಕ್ಷಣೆಗಾಗಿ  ಸಹಾಯವಾಣಿ ಸಂಖ್ಯೆ 1098 ಅಥವಾ 112 ಸಂಖ್ಯೆಗೆ(24/7) ಕರೆ ಮಾಡಬಹುದು ಎಂದು ಮನವಿ ಮಾಡಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯದಿಶೆ ಅರುಣಕುಮಾರಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಶ್ರೀನಿವಾಸ್,ಸರ್ಕಾರಿ ವಕೀಲರಾದ ಜಯರಾಮರೆಡ್ಡಿ,ಬಿಜಿಎಸ್ ವಿದ್ಯಾ ಸಂಸ್ಥೆಯ ಡಾ.ಮಧುಸೂದನ್,ವಿಕಾಸ್ ರೆಡ್ಡಿ, ಕೆ.ವಿ.ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಶಿವರಾಂ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವರದಿ-ತುಳಸಿನಾಯಕ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ