ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಹಿಳೆಯರು ಸಾಮಾಜಿಕ ಜಾಲತಾಣವನ್ನು ಬಳಸುವಲ್ಲಿ ಕಾನೂನು ಅರಿವು ಪಡೆಯುವುದು ಅತ್ಯಾವಶ್ಯಕವಾಗಿದೆ-ಡಾ.ಶಶಿರೇಖಾ ಮಾಳಗಿ

ಧಾರವಾಡ:ಅಧಿವಕ್ತ ಪರಿಷತ್ ಧಾರವಾಡ ಜಿಲ್ಲಾ ಘಟಕದ ವತಿಯಿಂದ “ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ”ಯನ್ನು ಡಾ.ಜಿ.ಎಂ. ಪಾಟೀಲ್ ಕಾನೂನು ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ಮತಿ ಡಾ.ಶಶಿರೇಖಾ ಮಾಳಗಿ(ಸಹಾಯಕ ಪ್ರಾಧ್ಯಾಪಕರು ಸರ್ ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯ ಧಾರವಾಡ) ಅವರು ” ಮಹಿಳೆಯರ ರಕ್ಷಣೆ ಮತ್ತು ಅಭಿರುದ್ಧಿಪಡಿಸುವಲ್ಲಿ ವಕೀಲರ ಪಾತ್ರ “ಎಂಬ ವಿಷಯದ ಕುರಿತು ಮಾತನಾಡುತ್ತಾ,ಭಾರತದಲ್ಲಿ ದಿನದಿಂದ ದಿನಕ್ಕೆ ಮಹಿಳೆಯರ ಕುರಿತಾದ ಹಲವಾರು ಅಪರಾಧ ಪ್ರಕ್ರಿಯೆಗಳು ನ್ಯಾಯಾಲಯದ ಮೆಟ್ಟಿಲನ್ನು ಏರುತ್ತಲೆ ಇವೆ ಇಂತಹ ದುರ್ನಡತೆಗಳನ್ನು ಮಟ್ಟಹಾಕಲು ಮೊದಲು ಮಹಿಳೆಯರು ಮೊಬೈಲ್ ಮತ್ತು ಜಾಲತಾಣದ ಬಳಕೆಯ ಕುರಿತು ಎಚ್ಚರವಹಿಸಬೇಕು ಮೇಲಾಗಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಂಡು ಬರುವಂತಹ ಬ್ಲಾಕ್ ಮೇಲ್,ಫ್ರಾಡ್ ಮೆಸೇಜ್ ಹಾಗೂ ಫ್ರಾಡ್ ಕರೆಗಳಿಗೆ ಗಮನಹರಿಸದೆ ಅಂತವುಗಳಿಗೆ ಪ್ರತ್ಯುತ್ತರ ನೀಡದೇ ನಿರಾಕರಿಸಬೇಕು ಅಷ್ಟೇ ಅಲ್ಲದೇ ಯಾವುದೇ ವೈಯಕ್ತಿಕ ಮಾಹಿತಿಯನ್ನು ಯಾವುದೇ ಅಪರಿಚಿತ ವ್ಯಕ್ತಿಯ ಜೊತೆ ಹಂಚಿಕೊಳ್ಳದೆ ಹಲವಾರು ಇನ್ಸ್ಟಾಗ್ರಾಮ್ ಫೇಸ್ಬುಕ್ ಇನ್ನಿತರ ಅಪ್ಲಿಕೇಶನ್ ಒಳಗೆ ಫೋಟೋಗಳನ್ನು ರವಾನಿಸುವಾಗ,ಪೋಸ್ಟ್ ಮಾಡುವಾಗಲೂ ತುಂಬಾ ಜಾಗರೂಕತೆಯಿಂದ ಇರಬೇಕು ಮತ್ತು ಇಡೀ ವಿಶ್ವದಲ್ಲೇ ಸೈಬರ್ ಸ್ಟಾಕಿಂಗ್ ಪ್ರಕರಣದಲ್ಲಿ ಭಾರತವು 3ನೇ ಸ್ಥಾನ ಪಡೆದಿದ್ದು ಇಂತಹ ಪ್ರಕರಣದಲ್ಲಿ ಹೆಚ್ಚಾಗಿ 14 ರಿಂದ 17 ವರ್ಷದ ಹೆಣ್ಣು ಮಕ್ಕಳೇ ಕಂಡುಬರುತ್ತಿದ್ದಾರೆಂದು ವರದಿ ಮೂಲಕ ತಿಳಿಯಲಾಗಿದೆ ಅಷ್ಟೇ ಅಲ್ಲದೇ ಮುಖ್ಯವಾಗಿ ಪ್ರತಿಯೊಬ್ಬ ಮಹಿಳೆಯರ ರಕ್ಷಣೆಗಾಗಿ(ಸೈಬರ್ ಸ್ಟಾಕಿಂಗ್) ಇತ್ತೀಚಿಗೆ ಕೇಂದ್ರ ಸರ್ಕಾರ ಹೊರಡಿಸಿದ ಸಹಾಯವಾಣಿ ಸಂಖ್ಯೆ 1930 ಗೆ ಕರೆ ಮಾಡುವ ಮೂಲಕ ತಮ್ಮ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಸಹಕಾರಿಯಾಗಿದ್ದು ಪ್ರತಿಯೊಬ್ಬರೂ ಈ ಸೈಬರ್ ತಂತ್ರಜ್ಞಾನದ ಬಗ್ಗೆ ಅರಿವನ್ನು ಹೊಂದಿರುವುದರ ಜೊತೆಗೆ ಕಾನೂನಿನ ಮೂಲಕ ಮಾಹಿತಿ ನೀಡುವಂತೆ ಹಲವಾರು ಶಿಬಿರ-ಕಾರ್ಯಕ್ರಮಗಳನ್ನು ಆಯೋಜಿಸಿ, ಅವರಿಗೆ ಶಿಕ್ಷಣ,ಕಾನೂನು ಅರಿವು,ಆತ್ಮ ವಿಶ್ವಾಸ ಈ ಮೂರು ಅಂಶಗಳನ್ನು ಕಾನೂನು ಜ್ಞಾನದ ಮೂಲಕ ತಿಳಿಸಿ ಮಹಿಳೆಯರ ರಕ್ಷಣೆ ಮತ್ತು ಅಭಿರುದ್ಧಿಪಡಿಸುವುದು ಪ್ರತಿಯೊಬ್ಬ ವಕೀಲರ ಪ್ರಮುಖವಾದ ಕರ್ತವ್ಯವಾಗಿದೆ ಅಂದಾಗ ಮಾತ್ರ ಮಹಿಳೆಯು ಆರ್ಥಿಕ,ಸಾಮಾಜಿಕ, ಸಾಂಸ್ಕೃತಿಕ ಹಾಗೂ ರಾಜಕೀಯವಾಗಿ ಬಲಿಷ್ಠಳಾಗಳು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಈ ವೇಳೆ ಅತಿಥಿಗಳು ಹಾಗೂ ಪ್ರಾಂಶುಪಾಲರಾದ (ಡಾ.ಜಿ.ಎಂ.ಪಾಟೀಲ್ ಕಾನೂನು ಮಹಾವಿದ್ಯಾಲಯ, ಧಾರವಾಡ) ಶ್ರೀ ಸಂಜಯ್ ಪಾಟೀಲ್,ಅಧಿವಕ್ತ ಪರಿಷತ್ತಿನ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಂ.ಎಂ.ಲಕ್ಷಟ್ಟಿ,ಜಿಲ್ಲಾಧ್ಯಕ್ಷರಾದ ಶ್ರೀ ಟಿ.ಎಸ್.ಕ್ವಾಟಿಹಳ್ಳಿ ಹಾಗೂ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಮತಿ ಸಾವಿತ್ರಿ ಕುಲಕರ್ಣಿ ಅವರು ಉಪಸ್ಥಿತರಿದ್ದು ಮಹಾವಿದ್ಯಾಲಯದ ವಿದ್ಯಾರ್ಥಿಗಳೂ ಭಾಗಿಯಾಗಿದ್ದರು.
ಈ ಕಾರ್ಯಕ್ರಮವನ್ನು ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಧರ ಹಂಚಿನಾಳ ಅತಿಥಿಗಳನ್ನು ಸ್ವಾಗತಿಸಿದರು,ಪರಿಷತ್ತಿನ ಅಭ್ಯಾಸ ವರ್ಗದ ಪ್ರಮುಖರಾದ ಮಧು.ಮು.ಕಡಕೋಳ ಅವರು ನಿರೂಪಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ