ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಚುನಾವಣೆ ನಿಮಿತ್ತ ಸೇನಾಪಡೆ ಹಾಗೂ ಪೊಲೀಸ್ ಪಥಸಂಚಲನ

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ 2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಕಾಸ್ ಲಮಾಣಿ ಸರ್ಕಲ್ ಇನ್ಸ್ ಪೆಕ್ಟರ್ ಮತ್ತು ಗೀತಾಂಜಲಿ ಸಿಂಧೆ ಪಿಎಸ್ಐ ನೇತೃತ್ವದಲ್ಲಿ ಇಂದು ಚುನಾವಣಾ ಭದ್ರತೆಗೆ ನಿಯೋಜನಗೊಂಡ ಅರೆ ಸೇನಾಪಡೆ ಹಾಗೂ ಪೊಲೀಸರ ಪಥ ಸಂಚಲನ ಮತ್ತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಮತದಾರರೇ ಹೆದರದಿರಿ ನಿಮ್ಮೊಂದಿಗೆ ನಾವಿದ್ದೇವೆ ನಿರ್ಭಯವಾಗಿ ಮತ ಚಲಾಯಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುತ್ತೇವೆ ಎಂಬ ಸಂದೇಶ ಸಾರುವ ಮೂಲಕ ಈ ಪಥಸಂಚಲನವನ್ನು ಕೈಗೊಂಡಿರುವುದಾಗಿ ಪಿಎಸ್ಐ ಗೀತಾಂಜಲಿ ಸಿಂಧೇ ತಿಳಿಸಿದರು.
ಪ್ರತಿಯೊಬ್ಬರೂ ಮತಗಟ್ಟೆಗೆ ಬಂದು ಮತ ಚಲಾವಣೆ ಮಾಡಿ ಪ್ರಜಾಪ್ರಭುತ್ವ ಗಟ್ಟಿ ಆಗಬೇಕಾಗಿದೆ.ಇದರಿಂದ ನ್ಯಾಯ ಸಮ್ಮತ ಅಭ್ಯರ್ಥಿ ಆಯ್ಕೆಯಾಗುವವರು ಆಗಾಗಿ ಜನರು ನಿರ್ಭಯವಾಗಿ ಮತ ಚಲಾಯಿಸಲು ಶಾಂತಿ ಹಾಗೂ ಭದ್ರತೆ ಕೈಗೊಳ್ಳುವ ನಮ್ಮ ಆದ್ಯ ಕರ್ತವ್ಯ ಆ ನಿಟ್ಟಿನಲ್ಲಿ ಇಂದು ಕೊಟ್ಟೂರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮತದಾರರಿಗೆ ದೈರ್ಯ ತುಂಬುವ ಕೆಲಸ ಮಾಡಿ ಮತ್ತು ನಮ್ಮ ಸಂವಿಧಾನ ನೀಡಿದ ಹಕ್ಕನ್ನು ಚಲಾಯಿಸಬೇಕು ಎಂದು ವಿಕಾಸ್ ಲಮಾಣಿ ಸರ್ಕಲ್ ಇನ್ಸ್ಪೆಕ್ಟರ್ ತಿಳಿಸಿದರು.
ಈ ಪಥಸಂಚಲನವನ್ನು ಸೌಮ್ಯವಿಕ್ರಂ ರಾಕೇಶ್ ಬಸವರಾಜ್ ಸೋಮಣ್ಣ ಮಣಿಕಂಠ ಇನ್ನೂ ಮುಂತಾದ ಯುವಕರು ಹಾಗೂ ಮುಖಂಡರು ಸೇರಿ ಸ್ವಾಗತವನ್ನು ಕೋರಿದರು.
ಈ ಸಂದರ್ಭದಲ್ಲಿ ಚಂದ್ರಮೌಳಿ,ಬಸವರಾಜ್, ಎರಿಸ್ವಾಮಿ,ವಿಷ್ಣುವರ್ಧನ,ರೇವಣಸಿದ್ದಪ್ಪ ಹಾಗೂ ಇನ್ನು ಮುಂತಾದ ಸಿಬ್ಬಂದಿ ವರ್ಗವೂ ಉಪಸ್ಥಿತರಿದ್ದರು.

ವರದಿ:ವೈ.ಮಹೇಶ್ ಕುಮಾರ್,ಕೊಟ್ಟೂರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ