ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಾಲೆಗೆ 1 ಲಕ್ಷ ಬೆಲೆ ಬಾಳುವ ಆಟದ ಸಾಮಗ್ರಿಗಳನ್ನುನೀಡಿದ ಪೀಪಲ್ ಫಾರ್ ಪೀಪಲ್ ಸಂಸ್ಥೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಸುಂಕದಗದ್ದೆ ಶಾಲೆಗೆ ಪೀಪಲ್ ಫಾರ್ ಪೀಪಲ್ ಸಂಸ್ಥೆಯ ಹೆಸರಾಂತ ವೈದ್ಯರಾದ ಡಾ.ಅರ್ಜುನ್ ಹಾಗೂ ಡಾ.ಸುನೀತಾ ಮೇಡಂ ರವರು 1 ಲಕ್ಷ ಬೆಲೆ ಬಾಳುವ ಆಟದ ಸಾಮಗ್ರಿಗಳನ್ನು ನೀಡಿದ್ದಾರೆ.ಈ ಶಾಲೆಯ ಜೊತೆಗೆ ತಲಮಕ್ಕಿ,ಹೋನಗೋಡು,ತುಪ್ಪುರು ಶಾಲೆಗೂ ಕೂಡಾ 1 ಲಕ್ಷ ಮೌಲ್ಯದ ಆಟದ ಸಾಮಗ್ರಿಗಳನ್ನು ನೀಡಿದ್ದಾರೆ. ಇವರ ಸೇವಾ ಕಾರ್ಯವನ್ನು ಸುಂಕದಗದ್ದೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸತೀಶ್ ಹಾಗೂ ಉಪಾಧ್ಯಕ್ಷರಾದ ಮಮತಾರವರು ಕೊಂಡಾಡಿದರು.ಮಲೆನಾಡಿನ ಮೂಲೆಯಲ್ಲಿರುವ ಶಾಲೆಯನ್ನು ಕೂಡಾ ಗುರುತಿಸಿ ಇವರು ನೀಡುವ ಸೇವೆ ತುಂಬಾ ಶ್ಲಾಘನೀಯವಾದುದು ಎಂದು ಸಹಶಿಕ್ಷಕರಾದ ಸಿ ಆರ್ ಸುರೇಶ್ ರವರು ಹೇಳಿದ್ದಾರೆ.ಸರ್ಕಾರಿ ಶಾಲೆಗಳನ್ನು ಉಳಿಸುವ ಕಾಳಜಿಗೆ ಎಸ್ ಡಿ ಎಂ ಸಿ ಪರವಾಗಿ ಹಾಗೂ ಊರಿನ ಪರವಾಗಿ ತುಂಬಾ ಹೃದಯದ ಧನ್ಯವಾದಗಳನ್ನು ಶಾಲೆಯ ಮುಖ್ಯಶಿಕ್ಷಕರಾದ ಮಮತಾರವರು ತಿಳಿಸಿದರು.ಈ ಸಂದರ್ಭದಲ್ಲಿ ಗಣೇಶ್,ಸಂಕೇತ್,ಕುಮಾರ್,ದಿವ್ಯ,ನವ್ಯ, ಪೂರ್ಣಿಮಾ,ಅಕ್ಷಯ್ ಹಾಗೂ ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ