ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪುರುಸೊತ್ತಿಲ್ಲದ ಪಂಚಾಯಿತಿ ಸಿಬ್ಬಂದಿ:ತುಂಬಿ ನಿಂತ ಚರಂಡಿ

ಹನೂರು:ಚರಂಡಿ ತುಂಬಾ ಹೂಳು ತುಂಬಿಕೊಂಡು ಗಬ್ಬೆದ್ದು ದುರ್ವಾಸನೆ ಬೀರುವುದರ ಜೊತೆಗೆ ಸೊಳ್ಳೆ ಕ್ರಿಮಿಕೀಟಗಳ ವಾಸಸ್ಥಾನವಾಗಿ ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ಇಲ್ಲಿನ ನಿವಾಸಿಗಳು ವಾಸಿಸುವಂತಹ ಪರಿಸ್ಥಿತಿಯಾಗಿದ್ದು ಇದು ಗ್ರಾಮ ಪಂಚಾಯತ್ ಆಡಳಿತ ವ್ಯವಸ್ಥೆಯ ನಿರ್ಲಕ್ಷಕ್ಕೆ ಹಿಡಿದ ಕನ್ನಡಿಯಾಗಿದೆ.
ತಾಲೂಕಿನ ಕೌದಳ್ಳಿ ಗ್ರಾಮ ಪಂಚಾಯತ್ ಗ್ರಾಮದ ರಸ್ತೆಯ 4ನೇ ವಾರ್ಡ್ ನ ಮನೆಗಳ ಮುಂದೆ ಮುಖ್ಯ ರಸ್ತೆಯಲ್ಲಿರುವ ಚರಂಡಿಗಳು ಸಂಪೂರ್ಣವಾಗಿ ಹೂಳು ತುಂಬಿಕೊಂಡು ಪ್ಲಾಸ್ಟಿಕ್ ತ್ಯಾಜ್ಯ ಕಸ ಕಟ್ಟಿಗಳಿಂದ ತುಂಬಿ ಕೊಳೆತು ಗಬ್ಬುನಾರುತ್ತಿದ್ದು ಗಿಡಗಳು ಬೆಳೆದು ನಿಂತಿದೆ.
ಚರಂಡಿಗಳಲ್ಲಿ ಸಂಪೂರ್ಣವಾಗಿ ಹೂಳು ತುಂಬಿಕೊಂಡಿರುವ ಪರಿಣಾಮ ಪ್ಲಾಸ್ಟಿಕ್ ತ್ಯಾಜ್ಯ ಕಸಕಡ್ಡಿಗಳು ಅಲ್ಲಿ ಕೊಳೆತು ಗಬ್ಬು ನಾರುವುದರ ಜೊತೆಗೆ ಸೊಳ್ಳೆ ಕ್ರಿಮಿ ಕೀಟಗಳು ಹೆಚ್ಚಾಗಿದೆ.ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೂ ವಾಸಿಸಲು ಕಿರಿಕಿರಿಯಾಗಿದ್ದು ಸಂಜೆಯಾಗುತ್ತಿದ್ದಂತೆ ಸೊಳ್ಳೆ ಕೀಟಗಳ ಕಾಟ ಹೆಚ್ಚಾಗತೊಡಗಿದೆ.
ಮನೆಯ ಮುಂದೆ ಗಬ್ಬೆದ್ದು ನಾರುತ್ತಿರುವ ಚರಂಡಿಯ ದುರ್ವಾಸನೆಗೆ ಮೂಗು ಮುಚ್ಚಿಕೊಂಡು ಸಂಜೆಯಾಗುತ್ತಿದ್ದಂತೆ ಸೊಳ್ಳೆ ಕ್ರಿಮಿ ಕೀಟಗಳ ಕಾಟದಿಂದ ದಿನಕಳೆಯುವ ಪರಿಸ್ಥಿತಿಯ ಜೊತೆಗೆ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳು ಹೆಚ್ಚಾಗಿದ್ದು ಇಂತಹ ಅನೈರ್ಮಲ್ಯ ವಾತಾವರಣದಲ್ಲಿ ದಿನ ಕಳೆಯುವಂತಾಗಿದೆ ಇಲ್ಲಿನ ಜನರ ಪರಿಸ್ಥಿತಿ.
ಗ್ರಾಮಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕಾದ ಗ್ರಾಮ ಪಂಚಾಯತ್ ಪಿ.ಡಿ.ಒ ಆಡಳಿತ ವ್ಯವಸ್ಥೆಯು ಕಂಡೂ ಕಾಣದಂತೆ ಜಾಣ ಕುರುಡತನ ಮೆರೆಯುತ್ತಿರುವುದಕ್ಕೆ ಹಿಡಿದ ಕನ್ನಡಿಯಾಗಿದೆ. ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಲು ಮುಂದಾಗದ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಶಾಪ ಹಾಕುತ್ತಿದ್ದಾರೆ.
ಈ ಬಗ್ಗೆ ಗ್ರಾಮ ಪಂ.ಅಧಿಕಾರಿಗಳ ಗಮನಕ್ಕೆ ತಿಳಿಸಿದ್ದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯ ನಿವಾಸಿಗಳು ಆರೋಪ ಮಾಡಿದ್ದಾರೆ.ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಹೂಳು ತುಂಬಿಕೊಂಡು ಗಬ್ಬೆದ್ದು ಹೋಗಿರುವ ಚರಂಡಿ ಹೂಳು ತೆಗೆಸಿ ಸ್ವಚ್ಛತೆ ಕಾಪಾಡಲು ಆದ್ಯತೆ ನೀಡಬೇಕಾಗಿದೆ.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ