ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮತದಾನ ನಮ್ಮ ಹಕ್ಕು ಹಾಗೂ ಕರ್ತವ್ಯ-ಸಂಜೀವ್ ಆರ್.ಮಾಂಗ

ಕಲಬುರಗಿ: ಮತದಾನ ಮಾಡುವುದು ನಮ್ಮೆಲ್ಲರ ಹಕ್ಕು ಮತ್ತು ಕರ್ತವ್ಯ ಎಂದು ಪುರಸಭೆ ಮುಖ್ಯಾಧಿಕಾರಿ ಸಂಜೀವ್ ಆರ್.ಮಾಂಗ ಹೇಳಿದರು

ಪುರಸಭೆ ಹಾಗೂ ತಾಲೂಕ ಸ್ವೀಪ್ ಸಮಿತಿ ಚಿತ್ತಾಪೂರ ರವರು ಆಯೋಜಿಸಿದ್ದ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು 5 ವರ್ಷಕ್ಕೊಮ್ಮೆ ಭಾರತೀಯ ನಾಗರಿಕರಿಗೆ ಸಿಗುವ ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಬೇಕು ಈ ಮೂಲಕ ರಾಷ್ಟ್ರದ ಅಭಿವೃದ್ಧಿಗೆ ಶ್ರಮಿಸಬಲ್ಲ ಜನಪ್ರತಿನಿಧಿಯನ್ನು ಆಯ್ಕೆ ಮಾಡಲು ಅವಕಾಶ ದೊರೆಯುತ್ತದೆ ಎಂದರು.
ಮತದಾನ ಜಾಗೃತಿ ಜಾಥಾ ಪುರಸಭೆ ಕಾರ್ಯಾಲಯದಿಂದ ನಾಗಾವಿ ಸರ್ಕಲ್,ಜನತಾ ಬಜಾರ್,ಭುವನೇಶ್ವರಿ ಚೌಕ ಮುಖಾಂತರ ಬಸ್ ಸ್ಟ್ಯಾಂಡ್,ಲಾಡ್ಜಿಂಗ್ ವೃತ್ತದವರೆಗೆ ಸಾಗಿತು.
ಈ ಸಂದರ್ಭದಲ್ಲಿ ತಹಶೀಲ್ದಾರರಾದ ಅಂಬ್ರೇಶ ಬಿರಾದಾರ ಸುನೀಲ್,ವಿಠ್ಠಲ್ ಹಾದಿಮನಿ,ಶರಣಪ್ಪ, ಆರೋಗ್ಯ ನಿರೀಕ್ಷಕ ವೆಂಕಟೇಶ ಕುಮಾರ, ಶರಣಕುಮಾರ,ಲೋಹಿತ್ ಕಟ್ಟಿಮನಿ, ಶಿರೇಸ್ತದಾರರಾದ ಅಶ್ವಥ ನಾರಾಯಣ,ರವಿಶಂಕರ, ನವಿನ್,ಮರೆಪ್ಪ,ಭೀಮರಾಯ ಸೇರಿದಂತೆ ಪುರಸಭೆ ಸಿಬ್ಬಂದಿ ಹಾಗೂ ಪೌರಕಾರ್ಮಿಕರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ