ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬೆಂಗಳೂರಿನಲ್ಲಿ ವನಸಿರಿ ಫೌಂಡೇಶನ್ ವತಿ ಪಕ್ಷಿಗಳಿಗೆ ನೀರಿನ ಅರವಟ್ಟಿಗೆ ನಿರ್ಮಾಣ

ಬೆಂಗಳೂರು ನಗರದ ಬಾನಸೋಡು ಏರಿಯಾದ ರಸ್ತೆಯ ಅಕ್ಕಪಕ್ಕದಲ್ಲಿರುವ ಮರಗಳಿಗೆ ವನಸಿರಿ ಫೌಂಡೇಶನ್ ಸದಸ್ಯರು ಬೇಸಿಗೆಯಿಂದ ಪಕ್ಷಿಗಳು ನೀರಿಗಾಗಿ ಅಲೆದಾಡುತ್ತಿರುವುದನ್ನು ಕಂಡು ಪ್ಲಾಸ್ಟಿಕ್ ಡಬ್ಬಗಳನ್ನು ಕಟ್ಟು ಮಾಡಿ ಮರಗಳಿಗೆ ಕಟ್ಟಿ ನೀರು ಹಾಕಿ ಪಕ್ಷಿಗಳಿಗೆ ನೀರುಣಿಸುವ ಮೂಲಕ ಪಕ್ಷಿಗಳ ಮೇಲೆ ಮಾನವೀಯತೆ ತೋರಿದರು.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ವನಸಿರಿ ಫೌಂಡೇಶನ್ ಗ್ರಾಮ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಸದಸ್ಯರಾದ ಯಮನೂರ ನಾಯಕ ಮತ್ತು ಅವರ ಸ್ನೇಹಿತರು ಗ್ರಾಮದಲ್ಲಿ ಮಳೆಯಿಲ್ಲದೆ ಸದ್ಯ ದುಡಿಯಲು ಯಾವುದೇ ಕೆಲಸಗಳು ಇಲ್ಲದಿರುವಾಗ ಬೆಂಗಳೂರಿನ ಬಾನಸೋಡಿ ಏರಿಯಾದಲ್ಲಿ ದುಡಿಯಲು ಹೋಗಿರುವಾಗ ಪಕ್ಷಿಗಳು ನೀರಿನ ದಾಹ ತೀರಿಸಿಕೊಳ್ಳಲು ಅಲೆದಾಡುತ್ತಿರುವುದನ್ನು ಕಂಡು ಬೆಂಗಳೂರಿನ ಗಿಡಮರಗಳಿಗೆ ಪ್ಲಾಸ್ಟಿಕ್ ಡಬ್ಬಿಗಳನ್ನು ಕಟ್ಟಿ ನೀರಿನ ದಾಹ ತೀರಿಸಲು ಮುಂದಾಗಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.

ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ಸದಸ್ಯರಾದ ಪ್ರಕಾಶ,ಪ್ರವೀಣ,ಬಸವರಾಜ,ಯಮನೂರ ನಾಯಕ ಹಾಗೂ ರಾಯಚೂರಿನ ಯುವಕರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ