ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕ್ಷಯರೋಗದ ಬಗ್ಗೆ ಜಾಗೃತಿ ಅಭಿಯಾನ ಕಾರ್ಯಕ್ರಮ

ಕೊಪ್ಪಳ/ಕುಷ್ಟಗಿ:ಕ್ಷಯರೋಗದ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸಿ, ಜಾಗೃತಿಗೊಳಿಸಬೇಕು.ಕ್ಷಯ ರೋಗಿಗಳಿಗೆ ಉತ್ತಮ ಚಿಕಿತ್ಸೆ, ನಮ್ಮವರೆಂಬ ಆತ್ಮೀಯ ಭಾವನೆಯಲ್ಲಿ ಸದಾ ಬೆರೆತು, ಅವರು ಉತ್ತಮ ಜೀವನ ನಡೆಸಲು ಮುಕ್ತ ಅವಕಾಶ ಮಾಡಿಕೊಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಅನ್ನಪೂರ್ಣ ಪಾಟೀಲ ಅವರು ಹೇಳಿದರು.
ತಾಲೂಕಿನ ದೋಟಿಹಾಳ ಗ್ರಾಮದ ಶುಖಮುನಿಸ್ವಾಮಿ ಹಳೆಯ ಮಠದ ಆವರಣದಲ್ಲಿ ದಯಾನಂದಪುರಿ ಸಂಘ ಹಾಗೂ ಗಾಯಿತ್ರಿ ಮಹಿಳಾ ಸಂಘ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ನಡೆದ ಕ್ಷಯರೋಗದ ಬಗ್ಗೆ ಜಾಗೃತಿ ಅಭಿಯಾನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕ್ಷಯ ರೋಗ ಸಾಂಕ್ರಾಮಿಕ ರೋಗವಾಗಿದ್ದು, ಲಕ್ಷ್ಮಣ ಕಾಣಿಸಿಕೊಂಡರೆ ತಕ್ಷಣ ಪರೀಕ್ಷೆ, ಸೂಕ್ತ ಚಿಕಿತ್ಸೆ ಪಡೆದು, ವೈದ್ಯರ ಸಲಹೆಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ವಿಚಾರಕ ರವೀಂದ್ರ ನಂದಿಹಾಳ ಅವರು ಮಾತನಾಡಿ ಕ್ಷಯರೋಗದ ಲಕ್ಷಣಗಳು ಕಂಡು ಬಂದವರು ಕೂಡಲೆ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷೆಯನ್ನು ಮಾಡಿಸಬೇಕು ಈ ರೋಗವು ಸಾಂಕ್ರಾಮಿಕ ರೋಗವಾಗಿದ್ದು ಬೇರೆಯವರಿಗೆ ರೋಗ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. 2025 ರೊಳಗೆ ಕ್ಷಯ ಮುಕ್ತ ದೇಶ ನಿರ್ಮಾಣ ಕಾರ್ಯಕ್ಕೆ ಸರ್ವರೂ ಕೈಜೋಡಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಜೀವಿನಿ ಮಹಿಳಾ ಸಂಘದ ಅಧ್ಯಕ್ಷೆ ಮಹಾದೇವಿ ಗೋತಗಿ, ಪೂರ್ಣಿಮಾ ದೇವಾಂಗಮಠ, ಸಲೀಮಾಬೇಗಂ, ಶ್ರೀನಿವಾಸ ಕಂಟ್ಲಿ, ಮಲ್ಲಪ್ಪ ಕೇಣೆದ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು,ಸಂಜೀವಿನಿ ಮಹಿಳಾ ಗುಂಪಿನ ಸದಸ್ಯರು ಸೇರಿದಂತೆ ಇತರರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ