ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮತದಾನ ಜಾಗೃತಿಗಾಗಿ “ಸ್ವೀಪ್ ಕಪ್ “ವಾಲಿಬಾಲ್ ಪಂದ್ಯಾವಳಿ ಆಯೋಜನೆ

ಉತ್ತರ ಕನ್ನಡ:ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಉತ್ತರ ಕನ್ನಡ, ತಾಲೂಕು ಆಡಳಿತ ಮತ್ತು ತಾಲೂಕ ಪಂಚಾಯತ ಮುಂಡಗೋಡ, ಪಟ್ಟಣ ಪಂಚಾಯತ ಮುಂಡಗೋಡ, ತಾಲೂಕು ಸ್ವೀಪ್ ಸಮಿತಿ ಮುಂಡಗೋಡ ಮತ್ತು ಬೆಳಕು ಸ್ವಯಂ ಸೇವಕರ ಸಂಘ ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ ಲೋಕಸಭಾ ಚುನಾವಣೆ-2024
ಮತದಾನ ಜಾಗೃತಿ ಅಂಗವಾಗಿ “ಸ್ವೀಪ್ ಕಪ್”
ತಾಲೂಕಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ಉದ್ಘಾಟನೆ ತಾಲೂಕ ಕ್ರೀಡಾಂಗಣ ಮುಂಡಗೋಡದಲ್ಲಿ ನಡೆಯಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ತಹಶೀಲ್ದಾರ್ ಶಂಕರ್ ಗೌಡಿ, ಮತದಾನ ಜಾಗೃತಿಗಾಗಿ ವಿನೂತನ ಕಾರ್ಯಕ್ರಮ ಇದಾಗಿದ್ದು ಮೇ 07 ರಂದು ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಿ ಜವಾಬ್ದಾರಿ ಮೆರೆಯಬೇಕು ಎಂದರು.

ತಾಲೂಕ ಪಂಚಾಯತ ಕಾರ್ಯನಿರ್ವಹಣಾ ಅಧಿಕಾರಿ ಟಿ ವಾಯ್ ದಾಸನಕೊಪ್ಪ ಮಾತನಾಡಿ ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪ್ರಮಾಣದ ಮತದಾನ ಆಗಬೇಕು ಆ ಕಾರಣಕ್ಕಾಗಿ ಮತದಾನ ಜಾಗೃತಿಗಾಗಿ ವಾಲಿಬಾಲ್ ಪಂದ್ಯಾವಳಿ ಆಯೋಜನೆ ಮಾಡಲಾಗಿದೆ. ಎಂದರು

ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಶಂಕರ್ ಗೌಡಿ, ಪಟ್ಟಣ ಪಂಚಾಯ್ತಿ ಮುಂಡಗೋಡ ಮುಖ್ಯಾಧಿಕಾರಿ ಚಂದ್ರಶೇಖರ್ ಬಿ.ತಾಲೂಕಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಟಿ ವಾಯ್ ದಾಸನಕೊಪ್ಪ, ಜಿಲ್ಲಾ ಪಂಚಾಯ್ತಿ ಎಂಜಿನಿಯರಿಂಗ್ ಇಲಾಖೆಯ ಪ್ರದೀಪ್ ಭಟ್,ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಸನ್ನ ಸಿಂಗ್ ಹಜಾರೆ,ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಿದ್ದೇಶ್ ಬಾಲಯ್ಯನವರ್ ಉಪಸ್ಥಿತರಿದ್ದರು.ಪ್ರಸನ್ನ ಸಿಂಗ್ ಹಜಾರೆ ಅವರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.ಡೋರಿ ಯವರು ಸ್ವಾಗತ ಕೋರಿದರು.

ಇದೇವೇಳೆ ವಾಲಿಬಾಲ್ ಪಂದ್ಯಾವಳಿ ಯ ಫೈನಲ್ ಪಂದ್ಯದಲ್ಲಿ ಮುಂಡಗೋಡ ದ ಐ ಎಫ್ ಸಿ ತಂಡವನ್ನು ಅರಿಷಿನಗೆರಿ ತಂಡ ಸೋಲಿಸುವ ಮೂಲಕ ಮೊದಲ ಬಹುಮಾನ ಪಡೆದುಕೊಂಡಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ