ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸುವರ್ಣ ಕರ್ನಾಟಕ ಕಾವ್ಯ ಪುರಸ್ಕಾರಕ್ಕಾಗಿ ಕವನ ಸಂಕಲನಗಳ ಅಹ್ವಾನ

ರಾಜ್ಯಮಟ್ಟದ ಸಾಹಿತ್ಯಾತ್ಮಕ ಸಂಸ್ಥೆಯಾದ ಗ್ರಾಮಾಂತರ ಬುದ್ಧಿಜೀವಿಗಳ ಬಳಗದ ವತಿಯಿಂದ ಕರ್ನಾಟಕ ರಾಜೋತ್ಸವದ ಸುವರ್ಣ ಮಹೋತ್ಸವದ ಅಂಗವಾಗಿ ಮುಂಬರುವ ಜೂನ್ ತಿಂಗಳಿನಲ್ಲಿ ರಾಜ್ಯ ಮಟ್ಟದ ಕನ್ನಡ ಹಬ್ಬ ನಡೆಸಲು ಯೋಜಿಸಲಾಗಿದ್ದು ಇದರ ಅಂಗವಾಗಿ ರಾಜ್ಯ ಮಟ್ಟದ ಕವನ ಸಂಕಲನ ಸ್ಪರ್ಧೆ ಏರ್ಪಡಿಸಲಾಗಿದೆ.2023 ಹಾಗೂ 24 ನೇ ಸಾಲಿನಲ್ಲಿ ಪ್ರಕಟಗೊಂಡಿರುವ ಕವನ ಸಂಕಲನಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದು.ಆಯ್ಕೆಯಾದ ಹತ್ತು ಅತ್ಯುತ್ತಮ ಕವನ ಸಂಕಲನಗಳಿಗೆ ರಾಜ್ಯ ಮಟ್ಟದ ಸುವರ್ಣ ಕರ್ನಾಟಕ ಕಾವ್ಯ ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು.
ಇದೇ ಸಂದರ್ಭದಲ್ಲಿ ಕೆ.ಎಸ್.ನ.ಕೃತಿ, ಉದಯೋನ್ಮುಖ ಕವಿಗಳ ಕೃತಿಗಳ ಲೋಕಾರ್ಪಣೆ,ಕೆ.ಎಸ್.ನ.ಕಾವ್ಯ ಪುರಸ್ಕಾರ ಪ್ರದಾನ,ರಾಜ್ಯ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮಗಳು ಜರುಗಲಿವೆ.
ಆಸಕ್ತಿಯುಳ್ಳ ಕವಿಗಳು ಹಾಗೂ ಕವಯತ್ರಿಯರು ತಾವು 2023 ಅಥವಾ 2024 ನೇ ಸಾಲಿನಲ್ಲಿ ಪ್ರಕಟಗೊಂಡಿರುವ ಕವನಸಂಕಲನದ ಮೂರು ಪ್ರತಿಗಳನ್ನು ತಮ್ಮ ಸ್ವವಿವರ ಹಾಗೂ ಭಾವಚಿತ್ರ ದೊಂದಿಗೆ ಮೇ ತಿಂಗಳ 20 ರ ಒಳಗಾಗಿ ತಲುಪುವಂತೆ ಡಾ.ಭೇರ್ಯರಾಮಕುಮಾರ್,ಅಧ್ಯಕ್ಷರು, ಗ್ರಾಮಾಂತರ ಬುದ್ಧಿ ಜೀವಿಗಳ ಬಳಗ,ಅರ್ಕೇಶ್ವರ ನಗರ ಬಡಾವಣೆ,ವಾರ್ಡ್ ನಂಬರ್ 6,
ಕೆ.ಆರ್.ನಗರ ಟೌನ್, ಮೈಸೂರು ಜಿಲ್ಲೆ,ಕರ್ನಾಟಕ, ಪಿನ್ -571602,
ಈ ವಿಳಾಸಕ್ಕೆ ಕಳಿಸುವುದು.ಹೆಚ್ಚಿನ ವಿವರಗಳಿಗೆ 6363172368 ಡಾ.ಭೇರ್ಯ ರಾಮಕುಮಾರ್ ಇವರನ್ನು ಸಂಪರ್ಕಿಸಬಹುದು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ