ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮತ್ತೊಮ್ಮೆ ಮೋದಿ ಪ್ರಧಾನಿಯಾಗಲು ಬಿಜೆಪಿ ಗೆ ಮತ ನೀಡಿ:ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಬಾಲರಾಜ್

ಹನೂರು ತಾಲೂಕಿನ ವಿವಿಧ ಗ್ರಾಮಗಳಾದ ಮಹದೇಶ್ವರ ಬೆಟ್ಟ ,ಮಾರ್ಟಳ್ಳಿ,ರಾಮಾಪುರ ಕೌದಳ್ಳಿ ಮುಂತಾದ ಗ್ರಾಮಗಳಲ್ಲಿ ಬಿಜೆಪಿ ಲೋಕಸಭಾ ಚುನಾವಣ ಅಭ್ಯರ್ಥಿ ಬಾಲರಾಜು ಇಂದು ರೋಡ್ ಶೋ ಮಾಡುವ ಮೂಲಕ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ನಮ್ಮ ಬಿಜೆಪಿ ಸರ್ಕಾರವು ಅನೇಕ ಜನಪರ ಕಾರ್ಯಕ್ರಮಗಳನ್ನು ಮಾಡಿದೆ ಅದರಲ್ಲಿ ಶುದ್ಧ ಕುಡಿಯುವ ನೀರು ಜಲಜೀವನ್ ಮಿಷನ್ ಹಾಗೂ ಗ್ರಾಮೀಣ ಬಡ ಮಹಿಳೆಯರಿಗೆ ಉಚಿತ ಗ್ಯಾಸ್ ನೀಡುವುದರ ಮೂಲಕ ಗ್ರಾಮೀಣ ಬಡ ಮಹಿಳೆಯರು ಹೊಗೆಯನ್ನು ಕುಡಿದು ತಮ್ಮ ಆರೋಗ್ಯವನ್ನು ಕೆಡಿಸಿಕೊಳ್ಳುವುದನ್ನು ತಪ್ಪಿಸಿದ್ದಾರೆ ರೈತರಿಗೆ ಜನ್ ಧನ್ ಮತ್ತು ಕಿಸಾನ್ ಸಮ್ಮಾನ್ ಯೋಜನೆ ಮುಂತಾದ ಜನಪ್ರ ಕೆಲಸಗಳನ್ನು ಮಾಡಿದ್ದಾರೆ ಹಾಗಾಗಿ ಇನ್ನೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿ ಆಗಬೇಕಾದರೆ ತಮ್ಮ ಅತ್ಯಮೂಲ್ಯವಾದ ಮತವನ್ನು ಬಿಜೆಪಿಗೆ ನೀಡಬೇಕು. ಎಂದರು.
ನಂತರ ಮಾತನಾಡಿದ ಅವರು ಈ ಲೋಕಸಭಾ ಚುನಾವಣೆಗೆ ನಾನು ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸುತ್ತಿದ್ದೇನೆ ಹಾಗಾಗಿ ನನ್ನ ಕ್ರಮ ಸಂಖ್ಯೆ 2 ಕಮಲದ ಗುರುತು ಬಿಜೆಪಿಗೆ ಮತವನ್ನು ನೀಡಿ ನನ್ನನ್ನು ಜಯಶೀಲರನ್ನಾಗಿ ಮಾಡಿ ತಮ್ಮ ಸೇವೆಯನ್ನು ಮಾಡಲು ನನಗೊಂದು ಅವಕಾಶ ಕೊಡಿ ನಿಮ್ಮ ಮತವನ್ನು ಬೇರೆ ಯಾವುದೇ ಪಕ್ಷಕ್ಕೆ ನೀಡದೆ ಬಿಜೆಪಿ ಪಕ್ಷಕ್ಕೆ ಮತ ನೀಡಬೇಕೆಂದು ಬಾಲರಾಜು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಹನೂರು ವಿಧಾನ ಸಭಾ ಕ್ಷೇತ್ರದ ಹಾಲಿ ಶಾಸಕರಾದ ಎಂ ಆರ್ ಮಂಜುನಾಥ್ ಹಾಗೂ ಬಿಜೆಪಿ ಮುಖಂಡರುಗಳಾದ ಡಾ. ದತ್ತೇಶ್ ಕುಮಾರ್, ಪ್ರೀತಂ ನಾಗಪ್ಪ ಜನದ್ವನಿ ವೆಂಕಟೇಶ್ ನಿಶಾಂತ್ ಮಂಡಲ ಅಧ್ಯಕ್ಷರು ಹಾಗೂ ಪಕ್ಷದ ಕಾರ್ಯಕರ್ತರು ಹಾಗೂ ಇನ್ನಿತರರು ಇದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ