ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವನಸಿರಿ ಫೌಂಡೇಶನ್ ನಿಂದ ಪಕ್ಷಿಗಳ ಅರವಟ್ಟಿಗೆ ಕಾರ್ಯಕ್ರಮ

ಸಿಂಧನೂರು ತಾಲೂಕಿನ ಇಜೆ ಹೊಸಳ್ಳಿ ಕ್ಯಾಂಪ್ ನ ನವಲಳ್ಳಿ ದುರ್ಗಾದೇವಿ ದೇವಾಲಯದ ಹತ್ತಿರ ವನಸಿರಿ ಫೌಂಡೇಶನ್ ವತಿಯಿಂದ ಪಕ್ಷಿಗಳ ಅರವಟ್ಟಿಗೆ ಕಾರ್ಯಕ್ರಮ ನಡೆಯಿತು.

ವನಸಿರಿ ಫೌಂಡೇಶನ್ ಹಲವಾರು ವರ್ಷಗಳಿಂದ ಪರಿಸರ ಸಂರಕ್ಷಣೆಗಾಗಿ ದಿನನಿತ್ಯ ಕಾಯಕದಲ್ಲಿ ತೊಡಗಿದೆ.ಸಾರ್ವಜನಿಕರಿಗೆ ಪರಿಸರ ಜಾಗೃತಿ ಮೂಡಿಸಲಾಗುತ್ತಿದೆ ಅದೇ ರೀತಿ ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರಿನ ದಾಹ ತೀರಿಸಲು ರಾಜ್ಯಾದ್ಯಂತ ಪಕ್ಷಿಗಳ ಅರವಟ್ಟಿಗೆ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ.ಇದರಿಂದ ಪಕ್ಷಗಳಿಗೆ ನೀರಿನ ದಾಹವನ್ನು ತೀರಿಸಿದಂತಾಗುತ್ತದೆ. ಇದನ್ನರಿತು ಮಕ್ಕಳು,ಮಹಿಳೆಯರು,ಪಕ್ಷಿಗಳಿಗೆ ನೀರುಣಿಸಲು ಮುಂದಾಗುತ್ತಿದ್ದಾರೆ ಅದೇ ಸಾಲಿನಲ್ಲಿ ಇಂದು ಸಿಂಧನೂರು ತಾಲೂಕಿನ ಹೊಸಳ್ಳಿ ಇಜೆ ಕ್ಯಾಂಪ್ ಯುವಕರು,ಮುದ್ದು ಮಕ್ಕಳು ಪಕ್ಷಿಗಳಿಗೆ ನೀರಿನ ದಾಹ ತೀರಿಸಲು ಮುಂದಾಗಿದ್ದಾರೆ ಇದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಇದೇರೀತಿ ಎಲ್ಲಾ ಸಾರ್ವಜನಿಕರು ಪಕ್ಷಿಗಳ ನೀರಿನ ಅರವಟ್ಟಿಗೆ ನಿರ್ಮಾಣ ಮಾಡಿ ನಿಮ್ಮ ಮನೆ,ಹಿತ್ತಲಿನ ಗಿಡಮರಗಳಿಗೆ ಕಟ್ಟಿ ಪ್ರಾಣಿ ಪಕ್ಷಿಗಳಿಗೆ ನೀರಿನ ದಾಹ ತೀರಿಸಲು ಮುಂದಾಗಬೇಕು ಎಂದು ವನಸಿರಿ ಫೌಂಡೇಶನ್ ಸದಸ್ಯ ಮುದುಕಪ್ಪ ಹೊಸಳ್ಳಿ ಕ್ಯಾಂಪ್ ಅವರು ಸಾರ್ವಜನಿಕರಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಬಸವರಾಜ ಸಂತೋಷ್,ರಮೇಶ, ಮುದುಕಪ್ಪ,ಹನುಮಂತ,ಗ್ರಾಮದ ಹಿರಿಯರು, ಮಹಿಳೆಯರು ಮತ್ತು ಮುದ್ದು ಮಕ್ಕಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ