ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಟ್ಟೆ ತೊಳೆಯಲು ಹೋಗಿ ಇಬ್ಬರು ಯುವಕರು ಕಾಲು ಜಾರಿ ನೀರು ಪಾಲು

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲಬಂಡ ಯುಕೆಪಿ ಬಸವಸಾಗರ ನಾಲೆಯಲ್ಲಿ ಪಾಲಕರೊಂದಿಗೆ ಬಟ್ಟೆ ತೊಳಿಯಲು ಹೋಗಿ ಇಬ್ಬರು ಯುವಕರು ಕಾಲು ಜಾರಿ ನೀರು ಪಾಲಾದ ಘಟನೆ ಜರುಗಿದ್ದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ ಮೃತ ಯುವಕರು ತಾಲೂಕಿನ ಬೆಂಡೋಣಿ ಗ್ರಾಮದ ಲಕ್ಕಪ್ಪ ವೀರುಪಾಕ್ಷಿಪ್ಪ ಕಮರಿ ಹಾಗೂ ಬಸವಂತ ತಂದೆ ಶರಣಪ್ಪ ಉಪ್ಪಾರ್ ಎನ್ನುವ ಸುಮಾರು ಇಪ್ಪತ್ತು ಇಪ್ಪತೈದು ವರುಷದ ಯುವಕರು ತಮ್ಮ ಪಾಲಕರೊಂದಿಗೆ ಮುಂಜಾನೆ ಜಾತ್ರೆ ನಿಮಿತ್ಯ ಬಟ್ಟೆ ತೊಳಿಯಲು ಹೋಗಿದ್ದರು ಎಂದು ಹೇಳಲಾಗುತ್ತಿದೆ. ನಾಲೆಯಲ್ಲಿ ಯುವಕರು ಕಾಲು ಜಾರಿ ಬೀಳುತ್ತಲೇ ಸ್ಥಳೀಯರು ನಾಲೆಗೆ ಜಿಗಿದು ರಕ್ಷಣೆಗೆ ಮುಂದಾಗಿದ್ದಾರೆ ಆದರೆ ಅಷ್ಟರಲ್ಲಿ ಯುವಕರು ಸಾವಿಗೀಡಾಗಿದ್ದು ಸ್ಥಳೀಯರು ಹುಡುಕಾಟ ನಡೆಸಿ ಮೃತ ದೇಹಗಳನ್ನು ಹೊರ ತೆಗೆಯಲಾಯಿತು ಎಂದು ತಿಳಿದು ಬಂದಿದೆ ಮೃತ ದೇಹಗಳನ್ನು ಶವ ಪರೀಕ್ಷೆಗೆ ಕಳುಹಿಸಲಾಯಿತು.

ವರದಿ ನಿರಂಜನ್ ಅಂಗಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ