ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಾಣಿಜ್ಯ ಮಳಿಗೆಗೆ ಬೆಂಕಿ:ಸಾರ್ವಜನಿಕರಲ್ಲಿ ಆತಂಕ

ಕೊಪ್ಪಳ ನಗರದ ಮಧ್ಯಭಾಗದಲ್ಲಿರುವ ವಾಣಿಜ್ಯ ಮಳಿಗೆಗೆ ಇಂದು ಮಧ್ಯಾಹ್ನ ಬೆಂಕಿ ಹೊತ್ತಿಕೊಂಡಿದ್ದು ದಟ್ಟ ಹೊಗೆ ಆವರಿಸಿಕೊಂಡಿದೆ ಇದರಿಂದ ಜನ ಆತಂಕಕ್ಕೆ ಒಳಗಾಗಿದ್ದರು.

ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದ ಎದುರು ಇರುವ ವರ್ಣೇಕರ್ ಕಾಂಪ್ಲೆಕ್ಸ್ ಮಾರ್ಗದಿಂದ ರೈಲ್ವೆ ನಿಲ್ದಾಣಕ್ಕೆ ತೆರಳುವ ಮಾರ್ಗದಲ್ಲಿ ಬೆಂಕಿ ಅವಘಡ ನಡೆದಿದೆ. ಪೇಂಟ್ ಮಾರಾಟದ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದ್ದು,ಅಗ್ನಿಶಾಮಕ ದಳ ಸಿಬ್ಬಂದಿ ಒಂದೂವರೆ ತಾಸಿನಿಂದ ಪ್ರಯತ್ನ ಮಾಡಿದರೂ ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ ಅಕ್ಕಪಕ್ಕದ ಅಂಗಡಿಗಳಿಗೂ ಬೆಂಕಿ ವ್ಯಾಪಿಸಿದೆ.
ವೇಗವಾಗಿ ಅಕ್ಕಪಕ್ಕದ ಅಂಗಡಿಗಳಿಗೂ ಬೆಂಕಿ ಹರಡುತ್ತಿರುವ ಕಾರಣ ವ್ಯಾಪಾರಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.ಬೆಂಕಿ ಹೊತ್ತಿಕೊಂಡ ಪಕ್ಕದ ಮಳಿಗೆಯಲ್ಲಿ ಎಸ್ ಬಿಐ ಎಟಿಎಂ ಕೇಂದ್ರ,ಅದರ ಪಕ್ಕದಲ್ಲಿ ಬ್ಯಾಟರಿಗಳ ಮಾರಾಟದ ಜೈಲಕ್ಷ್ಮಿ ಎಂಟರ್ ಪ್ರೈಸಸ್ ಇದೆ ಅದರಲ್ಲಿರುವ ಬ್ಯಾಟರಿಗಳನ್ನು ಹೊರಗಡೆ ತರಲು ಅಂಗಡಿಯವರು ಹಾಗೂ ಸಾರ್ವಜನಿಕರು ಕಸರತ್ತು ನಡೆಸಿದರು.ಖುದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಜನರನ್ನು ನಿಯಂತ್ರಿಸಲು ಲಾಠಿ ಹಿಡಿದು ಕೆಲಸ ನಿರ್ವಹಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ