ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

22ನೇ ತ್ರೈಮಾಸಿಕ ಮಹಾಧಿವೇಶನ ಪ್ರಾಥಮಿಕ ಪ್ರತಿನಿಧಿಗಳ ಚುನಾವಣೆ

ಇಂಡಿ -ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ 22ನೇ ತ್ರೈಮಾಸಿಕ ಮಹಾಧಿವೇಶನ ಪ್ರಾಥಮಿಕ ಪ್ರತಿನಿಧಿಗಳ ಚುನಾವಣೆಯು ಇಂಡಿ ಪಟ್ಟಣದ ಎಲ್. ಟಿ. ಎಂ. ಆರ. ಹೆಸ್ಕಾಂ ಕಚೇರಿಯಲ್ಲಿ ಬುಧವಾರದಂದು ಜರಗಿತು.

ಇಂಡಿ ಉಪ ವಿಭಾಗದಲ್ಲಿ 4 ಸ್ಥಾನಗಳಿಗೆ 10 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಅದರಲ್ಲಿ ಎರಡು ಅಭ್ಯರ್ಥಿಗಳು ನಾಮಪತ್ರವನ್ನು ಹಿಂಪಡೆದುಕೊಂಡಿದ್ದರಿಂದ 8 ಅಭ್ಯರ್ಥಿಗಳು ಕಣದಲ್ಲಿ ಉಳದಿದ್ದರು.
ಕಣದಲ್ಲಿ ಉಳಿದ ಅಭ್ಯರ್ಥಿಗಳ ಚುನಾವಣೆಯು ಮಧ್ಯಾಹ್ನ 12-00 ಗಂಟೆಯಿಂದ 4.30 ರ ವರೆಗೂ ನಡೆಯಿತು.ಇಂಡಿ ಶಹರ್ ಪೊಲೀಸ್ ಠಾಣೆಯ ಆರಕ್ಷಕ ಸಿಬ್ಬಂದಿಯವರು ಬಿಗಿ ಬಂದೋಬಸ್ತ್ ವಹಿಸಿದ್ದರು. ಸಾಯಂಕಾಲ 5:00 ಗಂಟೆಯಿಂದ ಮತ ಎಣಿಕೆ ಪ್ರಾರಂಭವಾಯಿತು. ತದನಂತರ ಚುನಾವಣಾ ಅಧಿಕಾರಿಗಳಾದ ಶ್ರೀ ಎಸ್. ಆರ. ಮೇಡೆಗಾರ್ ಎ.ಇ.ಇ ಹೆಸ್ಕಾಂ ಉಪ ವಿಭಾಗ ಇಂಡಿ ಇವರು ಚುನಾವಣಾ ಫಲಿತಾಂಶವನ್ನು ಘೋಷಣೆ ಮಾಡಿದರು.

1)ಶ್ರೀ ಪ್ರಶಾಂತ್. ವೈ .ಪಾಟೀಲ್ 122 ಮತ
2)ಶ್ರೀ ಎಸ್. ಬಿ. ಕಂಠಿಕಾರ್ 104 ಮತ
3)ಶ್ರೀ ಜಿ. ಡಿ. ಬಾಬಾನಗರ 95 ಮತ
4)ಶ್ರೀ ಸಂತೋಷ್. ಎಸ್.ಬಣಗೊಂಡೆ 95 ಮತ

ಈ ನಾಲ್ಕು ಅಭ್ಯರ್ಥಿಗಳು ಚುನಾವಣೆಯಲ್ಲಿ ವಿಜಯಶಾಲಿಯಾದರು.
ನಂತರ ಮಾತನಾಡಿದ ಶ್ರೀ ಸಿ ಎಂ ಕಾಂಬಳೆ ಅವರು ನಾಲ್ಕು ಅಭ್ಯರ್ಥಿಗಳ ಆಯ್ಕೆಯಲ್ಲಿ ನಮ್ಮ ಪ್ರಗತಿಪರ ತಂಡದ ಮೂರು ಅಭ್ಯರ್ಥಿಗಳು ಜಯಶೀಲರಾಗಿದ್ದು, ಪ್ರತ್ಯಕ್ಷವಾಗಿ, ಪರೋಕ್ಷವಾಗಿ, ಬೆಂಬಲಿಸಿದ ಎಲ್ಲ ಅಧಿಕಾರಿಗಳಿಗೂ ಹಾಗೂ ನೌಕರ ಮಿತ್ರರಿಗೂ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ,ವಿಶ್ವಾಸ ಸದಾ ಹೀಗೆ ಇರಲಿ. ನಮ್ಮ ಪ್ರಗತಿಪರ ತಂಡ ಯಾವತ್ತು ಚಿರಋಣಿಯಾಗಿರುತ್ತದೆ ಎಂದು ಹೇಳಿದರು.

ವರದಿ – ಕರುನಾಡ ಕಂದ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ